<p><strong>ಆನೇಕಲ್: </strong>ತಾಲ್ಲೂಕಿನ ದೊಮ್ಮಸಂದ್ರ ಗ್ರಾಮದ ಶಾಲೆ ಮತ್ತು ಆಸ್ಪತ್ರೆಯ ಪಕ್ಕದಲ್ಲಿಯೇ ಕಸದ ರಾಶಿ ಬಿದ್ದಿದ್ದು ಗಬ್ಬು ನಾರುತ್ತಿದೆ.</p>.<p>ಸುತ್ತಮುತ್ತಲಿನ ಮನೆಗಳ ಕಸವನ್ನು ಇಲ್ಲಿ ಎಸೆಯಲಾಗಿದ್ದು ಗ್ರಾಮ ಪಂಚಾಯಿತಿಯು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳತೆ ಸ್ವಚ್ಛತೆಯೆಂಬುದು ಇಲ್ಲಿ ಕನಸಾಗಿದೆ.</p>.<p>ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತೆಗಾಗಿ ಆಂದೋಲನ ನಡೆಯುತ್ತಿದೆ. ಸ್ವಚ್ಛ ಗ್ರಾಮ ಪಂಚಾಯಿತಿ ಎಂಬುದು ಸರ್ಕಾರ ಆಶಯವಾಗಿದೆ. ಆದರೆ ದೊಮ್ಮಸಂದ್ರದಲ್ಲಿ ಕಸ ಎಸೆಯಬಾರದು ಎಂಬ ಗೋಡೆಬರಹ ಬರೆಯಲಾಗಿದೆ. ಆದರೆ ಗೋಡೆಯ ಮುಂದೆಯೇ ಕಸದ ರಾಶಿ ಬಿದ್ದಿದೆ. ಪ್ರತಿದಿನ ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು, ಕಾರ್ಮಿಕರು ಈ ಭಾಗದಲ್ಲಿ ಓಡಾಡುತ್ತಾರೆ. ರಸ್ತೆ ಪಕ್ಕದಲ್ಲಿಯೇ ಕಸ ರಾಶಿ ಬಿದ್ದಿರುವುದರಿಂದ ಗಬ್ಬುನಾರುತ್ತಿದೆ. ಜನರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ಉಂಟಾಗಿದೆ.</p>.<p>ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸಾಗರ ವಿದ್ಯಾ ಸಂಸ್ಥೆ, ಮಧುಕಾಂತ ವಿದ್ಯಾ ಸಂಸ್ಥೆಗಳಿವೆ. ಈ ಶಾಲೆಗಳಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ರತಿದಿನ ಕಸದ ಪಕ್ಕದಲ್ಲಿಯೇ ನಡೆದು ಹೋಗಬೇಕಾದ ಪರಿಸ್ಥಿತಿಯಿದೆ. ಮತ್ತೊಂದು ಬದಿಯಲ್ಲಿ ಸರ್ಕಾರಿ ಆಸ್ಪತ್ರೆಯಿದೆ. ಈ ಭಾಗದಲ್ಲಿ ಕಸದ ರಾಶಿ ತುಂಬಿದೆ. ಕಸವನ್ನು ತೆರವುಗೊಳಿಸಬೇಕು ಎಂಬುದು ಸ್ಥಳೀಯರ ಹಾಗೂ ವಿದ್ಯಾರ್ಥಿಗಳ ಒತ್ತಾಸೆಯಾಗಿದೆ.</p>.<p>ದೊಮ್ಮಸಂದ್ರ ಜಗದೀಶ್ ಮಾತನಾಡಿ, ಕಸ ಎಸೆಯಬಾರದು ಎಂದು ಗೋಡೆ ಬರಹ ಬರೆಯಲಾಗಿದೆ. ಆದರೆ ಕಸ ಹಾಕದಂತೆ ತಡೆಯುವ ಕೆಲಸ ನಡೆದಿಲ್ಲ. ಹಾಗಾಗಿ ಕಸದ ರಾಶಿ ತುಂಬಿದೆ. ಶಾಲೆಯ ಪಕ್ಕದಲ್ಲಿಯೇ ಅಂಗಡಿಗಳು, ಮನೆಗಳ ಕಸವನ್ನು ಎಸೆಯುತ್ತಿದ್ದು ತಿಪ್ಪೆಗುಂಡಿಯಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ದೊಮ್ಮಸಂದ್ರ ಗ್ರಾಮದ ಶಾಲೆ ಮತ್ತು ಆಸ್ಪತ್ರೆಯ ಪಕ್ಕದಲ್ಲಿಯೇ ಕಸದ ರಾಶಿ ಬಿದ್ದಿದ್ದು ಗಬ್ಬು ನಾರುತ್ತಿದೆ.</p>.<p>ಸುತ್ತಮುತ್ತಲಿನ ಮನೆಗಳ ಕಸವನ್ನು ಇಲ್ಲಿ ಎಸೆಯಲಾಗಿದ್ದು ಗ್ರಾಮ ಪಂಚಾಯಿತಿಯು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳತೆ ಸ್ವಚ್ಛತೆಯೆಂಬುದು ಇಲ್ಲಿ ಕನಸಾಗಿದೆ.</p>.<p>ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತೆಗಾಗಿ ಆಂದೋಲನ ನಡೆಯುತ್ತಿದೆ. ಸ್ವಚ್ಛ ಗ್ರಾಮ ಪಂಚಾಯಿತಿ ಎಂಬುದು ಸರ್ಕಾರ ಆಶಯವಾಗಿದೆ. ಆದರೆ ದೊಮ್ಮಸಂದ್ರದಲ್ಲಿ ಕಸ ಎಸೆಯಬಾರದು ಎಂಬ ಗೋಡೆಬರಹ ಬರೆಯಲಾಗಿದೆ. ಆದರೆ ಗೋಡೆಯ ಮುಂದೆಯೇ ಕಸದ ರಾಶಿ ಬಿದ್ದಿದೆ. ಪ್ರತಿದಿನ ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು, ಕಾರ್ಮಿಕರು ಈ ಭಾಗದಲ್ಲಿ ಓಡಾಡುತ್ತಾರೆ. ರಸ್ತೆ ಪಕ್ಕದಲ್ಲಿಯೇ ಕಸ ರಾಶಿ ಬಿದ್ದಿರುವುದರಿಂದ ಗಬ್ಬುನಾರುತ್ತಿದೆ. ಜನರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ಉಂಟಾಗಿದೆ.</p>.<p>ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸಾಗರ ವಿದ್ಯಾ ಸಂಸ್ಥೆ, ಮಧುಕಾಂತ ವಿದ್ಯಾ ಸಂಸ್ಥೆಗಳಿವೆ. ಈ ಶಾಲೆಗಳಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ರತಿದಿನ ಕಸದ ಪಕ್ಕದಲ್ಲಿಯೇ ನಡೆದು ಹೋಗಬೇಕಾದ ಪರಿಸ್ಥಿತಿಯಿದೆ. ಮತ್ತೊಂದು ಬದಿಯಲ್ಲಿ ಸರ್ಕಾರಿ ಆಸ್ಪತ್ರೆಯಿದೆ. ಈ ಭಾಗದಲ್ಲಿ ಕಸದ ರಾಶಿ ತುಂಬಿದೆ. ಕಸವನ್ನು ತೆರವುಗೊಳಿಸಬೇಕು ಎಂಬುದು ಸ್ಥಳೀಯರ ಹಾಗೂ ವಿದ್ಯಾರ್ಥಿಗಳ ಒತ್ತಾಸೆಯಾಗಿದೆ.</p>.<p>ದೊಮ್ಮಸಂದ್ರ ಜಗದೀಶ್ ಮಾತನಾಡಿ, ಕಸ ಎಸೆಯಬಾರದು ಎಂದು ಗೋಡೆ ಬರಹ ಬರೆಯಲಾಗಿದೆ. ಆದರೆ ಕಸ ಹಾಕದಂತೆ ತಡೆಯುವ ಕೆಲಸ ನಡೆದಿಲ್ಲ. ಹಾಗಾಗಿ ಕಸದ ರಾಶಿ ತುಂಬಿದೆ. ಶಾಲೆಯ ಪಕ್ಕದಲ್ಲಿಯೇ ಅಂಗಡಿಗಳು, ಮನೆಗಳ ಕಸವನ್ನು ಎಸೆಯುತ್ತಿದ್ದು ತಿಪ್ಪೆಗುಂಡಿಯಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>