ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತೆಗಾಗಿ ಆಂದೋಲನ ನಡೆಯುತ್ತಿದೆ. ಸ್ವಚ್ಛ ಗ್ರಾಮ ಪಂಚಾಯಿತಿ ಎಂಬುದು ಸರ್ಕಾರ ಆಶಯವಾಗಿದೆ. ಆದರೆ ದೊಮ್ಮಸಂದ್ರದಲ್ಲಿ ಕಸ ಎಸೆಯಬಾರದು ಎಂಬ ಗೋಡೆಬರಹ ಬರೆಯಲಾಗಿದೆ. ಆದರೆ ಗೋಡೆಯ ಮುಂದೆಯೇ ಕಸದ ರಾಶಿ ಬಿದ್ದಿದೆ. ಪ್ರತಿದಿನ ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು, ಕಾರ್ಮಿಕರು ಈ ಭಾಗದಲ್ಲಿ ಓಡಾಡುತ್ತಾರೆ. ರಸ್ತೆ ಪಕ್ಕದಲ್ಲಿಯೇ ಕಸ ರಾಶಿ ಬಿದ್ದಿರುವುದರಿಂದ ಗಬ್ಬುನಾರುತ್ತಿದೆ. ಜನರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ಉಂಟಾಗಿದೆ.