ಪಟ್ಟಣದ ಚನ್ನಕೇಶವಸ್ವಾಮಿ ದೇವಾಲಯದ ರಸ್ತೆಯಲ್ಲಿ ದಾನಿಗಳು ಹಾಗೂ ಜನಪ್ರತಿನಿಧಿಗಳು ನೀಡಿರುವ ಅನುದಾನದಲ್ಲಿ ಭವನವನ್ನು ನಿರ್ಮಿಸಲಾಗುತ್ತಿದೆ. ಆದರೆ ಕಾಮಗಾರಿ ಅರ್ಧಕ್ಕೆ ನಿಂತಿರುವ ಕಾರಣ ಆ ಕಟ್ಟಡ ಕುಡುಕರು ಹಾಗೂ ಅನೈತಿಕ ಚಟುವಟಿಕೆಗಳ ಗೂಡಾಗಿದೆ. ಕಟ್ಟಡದ ಸುತ್ತಲೂ ಮದ್ಯದ ಬಾಟಲಿಗಳು, ಪಾಕೇಟುಗಳು, ಕಾಂಡೋಮ್ಗಳು ಬಿದ್ದಿವೆ. ಈ ಕುರಿತು ಜಿಲ್ಲಾಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹಾಗೂ ತಾಲ್ಲೂಕು ಅಧ್ಯಕ್ಷರ ಗಮನಕ್ಕೂ ತಂದಿದ್ದರೂ ಪ್ರಯೋಜನವಾಗಿಲ್ಲ. ಒಂದು ತಿಂಗಳಲ್ಲಿ ಕಾಮಗಾರಿ ಆರಂಭಿಸುತ್ತೇವೆ ಎಂದು ಹೇಳಿದವರು ಒಂದು ವರ್ಷ ಕಳೆದರೂ ಕಾಮಗಾರಿ ಆರಂಭವಾಗಿಲ್ಲ.