<p><strong>ದೇವನಹಳ್ಳಿ</strong>: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟ್ಯಾಕ್ಸಿಗಳ ನಿಲ್ದಾಣ ಪಿ–7ನಲ್ಲಿ ಮಂಗಳವಾರ ತಡರಾತ್ರಿ ಕೆಎಸ್ಟಿಡಿಸಿ ಟ್ಯಾಕ್ಸಿ ಚಾಲಕನನ್ನು ಚೂಪದ ಕೀ ಮಾದರಿಯ ವಸ್ತು ಚುಚ್ಚಿ ಕೊಲೆ ಮಾಡಲಾಗಿದೆ.</p>.<p>ಮೃತನನ್ನು ದೇವನಹಳ್ಳಿಯ ರಾಮುಹಳ್ಳಿ ನಿವಾಸಿ ಲೋಕೇಶ್ (35) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಕನಕಪುರದ ಟ್ಯಾಕ್ಸಿ ಚಾಲಕ ಮುತ್ತುರಾಜು ಎನ್ನಲಾಗಿದೆ.</p>.<p>ಇಬ್ಬರೂ ಸ್ನೇಹಿತರಾಗಿದ್ದು, ಲೋಕೇಶ್ ಅವರಿಂದ ಮುತ್ತುರಾಜ್ ಹಣ ಪಡೆದಿದ್ದರು ಎನ್ನಲಾಗಿದೆ. ಮಂಗಳವಾರ ತಡರಾತ್ರಿ ಕೆಎ 05 ಎಜೆ 4094 ಸಂಖ್ಯೆ ಟ್ಯಾಕ್ಸಿಯಲ್ಲಿ ಕುಳಿತು ಹಣ ವಾಪಸ್ ವಿಚಾರ ಮಾತನಾಡುತ್ತಿದ್ದರು. ಈ ವೇಳೆ ಮಾತು ವಿಕೋಪಕ್ಕೆ ತಿರುಗಿ, ಮುತ್ತುರಾಜ್ ತಮ್ಮ ಕೈಯಲ್ಲಿದ್ದ ಕೀ ಮಾದರಿಯ ಚೂಪಾದ ವಸ್ತುವನ್ನು ಎದೆಯ ಭಾಗಕ್ಕೆ ಜೋರಾಗಿ ಚುಚ್ಚಿದ ಪರಿಣಾಮ ಲೋಕೇಶ್ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.</p>.<p>ಪ್ರಕರಣ ಕುರಿತಂತೆ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೂರು ದಾಖಲಾಗಿದೆ. ಏರ್ಪೋರ್ಟ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟ್ಯಾಕ್ಸಿಗಳ ನಿಲ್ದಾಣ ಪಿ–7ನಲ್ಲಿ ಮಂಗಳವಾರ ತಡರಾತ್ರಿ ಕೆಎಸ್ಟಿಡಿಸಿ ಟ್ಯಾಕ್ಸಿ ಚಾಲಕನನ್ನು ಚೂಪದ ಕೀ ಮಾದರಿಯ ವಸ್ತು ಚುಚ್ಚಿ ಕೊಲೆ ಮಾಡಲಾಗಿದೆ.</p>.<p>ಮೃತನನ್ನು ದೇವನಹಳ್ಳಿಯ ರಾಮುಹಳ್ಳಿ ನಿವಾಸಿ ಲೋಕೇಶ್ (35) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಕನಕಪುರದ ಟ್ಯಾಕ್ಸಿ ಚಾಲಕ ಮುತ್ತುರಾಜು ಎನ್ನಲಾಗಿದೆ.</p>.<p>ಇಬ್ಬರೂ ಸ್ನೇಹಿತರಾಗಿದ್ದು, ಲೋಕೇಶ್ ಅವರಿಂದ ಮುತ್ತುರಾಜ್ ಹಣ ಪಡೆದಿದ್ದರು ಎನ್ನಲಾಗಿದೆ. ಮಂಗಳವಾರ ತಡರಾತ್ರಿ ಕೆಎ 05 ಎಜೆ 4094 ಸಂಖ್ಯೆ ಟ್ಯಾಕ್ಸಿಯಲ್ಲಿ ಕುಳಿತು ಹಣ ವಾಪಸ್ ವಿಚಾರ ಮಾತನಾಡುತ್ತಿದ್ದರು. ಈ ವೇಳೆ ಮಾತು ವಿಕೋಪಕ್ಕೆ ತಿರುಗಿ, ಮುತ್ತುರಾಜ್ ತಮ್ಮ ಕೈಯಲ್ಲಿದ್ದ ಕೀ ಮಾದರಿಯ ಚೂಪಾದ ವಸ್ತುವನ್ನು ಎದೆಯ ಭಾಗಕ್ಕೆ ಜೋರಾಗಿ ಚುಚ್ಚಿದ ಪರಿಣಾಮ ಲೋಕೇಶ್ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.</p>.<p>ಪ್ರಕರಣ ಕುರಿತಂತೆ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೂರು ದಾಖಲಾಗಿದೆ. ಏರ್ಪೋರ್ಟ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>