ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ನ್ಯಾಯಾಧೀಶರ ನಡೆ ಹಳ್ಳಿಕಡೆ: ರಸ್ತೆ ಬದಿ ಅನಧಿಕೃತ ಮಳಿಗೆ ತೆರವಿಗೆ ಸೂಚನೆ

Published : 28 ಆಗಸ್ಟ್ 2023, 7:47 IST
Last Updated : 28 ಆಗಸ್ಟ್ 2023, 7:47 IST
ಫಾಲೋ ಮಾಡಿ
Comments
ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಸಮೀಪ ಅರಣ್ಯ ಇಲಾಖೆ ಒತ್ತುವರಿ ತೆರವುಗೊಳಿಸಿರುವ ಸ್ಥಳಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ ಭೇಟಿ ನೀಡಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು
ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಸಮೀಪ ಅರಣ್ಯ ಇಲಾಖೆ ಒತ್ತುವರಿ ತೆರವುಗೊಳಿಸಿರುವ ಸ್ಥಳಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ ಭೇಟಿ ನೀಡಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು
ಅಧಿಕಾರಿಗಳ ವಿರುದ್ಧ ಕ್ರಮ
ತಾಲ್ಲೂಕಿನ ಹಾಡೋನಹಳ್ಳಿ ಸಮೀಪ 150 ಎಕರೆಯಷ್ಟು ಒತ್ತುವರಿಯಾಗಿದ್ದ ಭೂಮಿಯನ್ನು ಅರಣ್ಯ ಇಲಾಖೆ ತೆರವು ಮಾಡಿರುವುದು ಶ್ಲಾಘನೀಯ. ಅರಣ್ಯ ಇಲಾಖೆಗೆ ಸೇರಿರುವ ಭೂಮಿಯನ್ನು ಸ್ಥಳ ಪರಿಶೀಲನೆ ಮಾಡದಲೇ ರೈತರಿಗೆ ಮಂಜೂರು ಮಾಡುವ ಅಧಿಕಾರಿಗಳ ವಿರುದ್ಧವು ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಸಂದೀಪ್ ಸಾಲಿಯಾನ ಹೇಳಿದರು. ತೆರವು ಮಾಡಲಾಗಿರುವ ಭೂಮಿಯಲ್ಲಿ ಅರಣ್ಯ ಇಲಾಖೆ ಸಸಿಗಳನ್ನು ಬೆಳೆಸಲು ಮುಂದಾಗಬೇಕು. ಅರಣ್ಯ ಸಂಪತ್ತು ಕುಸಿತದಿಂದ ಇಂದು ಮಳೆ ಬೀಳುವುದು ಸೇರಿದಂತೆ ಎಲ್ಲಾ ರೀತಿಯ ವಾತಾವರಣವು ಏರುಪೇರಾಗುತ್ತಿವೆ. ಮನುಕುಲವಷ್ಟೇ ಅಲ್ಲದೆ ಇಡೀ ಪರಿಸರದಲ್ಲಿನ ಸಕಲ ಜೀವಸಂಕುಲ ಉಳಿಯಬೇಕಾದರೆ ಅರಣ್ಯ ಇಲಾಖೆ ಕೆಲಸ ಅತ್ಯಂತ ಮಹತ್ವದ್ದಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT