ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ‘ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಅಪರಿಚಿತರು ಕಂಡುಬಂದರೆ ಪೊಲೀಸ್ ನಿಯಂತ್ರಣ ಕೊಠಡಿ 112ಕ್ಕೆ ಕರೆ ಮಾಡಿ ವಿಷಯ ತಿಳಿಸಬೇಕು. ಸಂಬಂಧಪಟ್ಟ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸುತ್ತಾರೆ’ ಎಂದಿದ್ದಾರೆ. ‘ಸುಳ್ಳು ಮಾಹಿತಿಯಿಂದಾಗಿ ಜನರು ಆತಂಕಗೊಂಡಿದ್ದಾರೆ. ಅಪರಿಚಿತ, ಅಮಾಯಕ ಜನರನ್ನು ಅಡ್ಡಗಟ್ಟಿ ಥಳಿಸುತ್ತಿದ್ದಾರೆ.