ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗೀಕರಣಕ್ಕೆ ಪ್ರತಿಭಟನೆ ಶಾಕ್‌

ಜಿಲ್ಲೆಯ ವಿವಿಧೆಡೆ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ ಬೆಸ್ಕಾಂ ಸಿಬ್ಬಂದಿ
Last Updated 6 ಅಕ್ಟೋಬರ್ 2020, 2:51 IST
ಅಕ್ಷರ ಗಾತ್ರ

ದೇವನಹಳ್ಳಿ/ ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರವು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವುದನ್ನು ವಿರೋಧಿಸಿ ಗ್ರಾಮಾಂತರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಯಿತು.

ಬೆಸ್ಕಾಂ ಸಿಬ್ಬಂದಿ ಕಪ್ಪು ಪಟ್ಟಿ ಚಳವಳಿ ನಡೆಸಿದರು. ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ದೇವನಹಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬೆಸ್ಕಾಂ ಸಹಾಯಕ ಎಂಜಿನಿಯರ್‌ ಶ್ರೀನಿವಾಸ್, ‘ಬೆಸ್ಕಾಂನ್ನು ಖಾಸಗೀಕರಣ ಮಾಡಿದರೆ ಪ್ರಸ್ತುತ ಸರ್ಕಾರ ನೀಡುತ್ತಿರುವ ಸೌಲಭ್ಯಗಳು ಸಿಗುವುದಿಲ್ಲ. ರೈತರಿಗೆ ಉಚಿತ ಸೌಲಭ್ಯಗಳು ಇರುವುದಿಲ್ಲ. ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಬಡವರಿಗೆ ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿ ಯೋಜನೆಯಡಿ ಮನೆಗಳಿಗೆ ಉಚಿತ ವಿದ್ಯುತ್ ಪೂರೈಕೆಗೆ ಕಡಿವಾಣ ಬೀಳಲಿದೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಿಸುವ ಕೊಳವೆ ಬಾವಿಗಳಿಗೆ ಬೆಸ್ಕಾಂನಿಂದ ವಿದ್ಯುತ್ ಕಂಬಗಳು ಮತ್ತು ಇತರ ಪರಿಕರ ಉಚಿತವಾಗಿ ನೀಡಿ ಕೊಳವೆ ಬಾವಿಗೆ ಸಂಪರ್ಕ ವ್ಯವಸ್ಥೆ ಮಾಡುತ್ತಿದ್ದು ಅದು ಸಹ ತಪ್ಪಿ ಹೋಗಲಿದೆ. ಕೇಂದ್ರ ಸರ್ಕಾರ ಈಗಾಗಲೇ ಕೆಲವು ರಾಜ್ಯಗಳಲ್ಲಿ ಖಾಸಗಿಕರಣ ಮಾಡಿರುವುದರಿಂದ ರೈತರು ಮತ್ತು ಸಾರ್ವಜನಿಕರು ಶೋಷಣೆಗೆ ಒಳಗಾಗುತ್ತಿದ್ದಾರೆ’ ಎಂದು ದೂರಿದರು.

‘ರೈತರಿಗೆ ಒಂದು ಕೊಳವೆ ಬಾವಿಗೆ ನೂತನವಾಗಿ ಸಂಪರ್ಕ ಕಲ್ಪಿಸಲು ₹ 10ಸಾವಿರದಿಂದ 20 ಸಾವಿರ ಮಾತ್ರ ಬೆಸ್ಕಾಂ ರೈತರಿಂದ ಪಡೆಯುತ್ತದೆ. ಉಳಿದ ಮೊತ್ತವನ್ನು ಬೆಸ್ಕಾಂ ಭರಿಸಿಕೊಳ್ಳತ್ತದೆ. ಖಾಸಗೀಕರಣ ಆದರೆ ಈ ವ್ಯವಸ್ಥೆ ಇರುವುದಿಲ್ಲ. ವಾಣಿಜ್ಯ ಮಳಿಗೆಗಳು ವಾಸದ ಮನೆ ಇತರೆ ಕಟ್ಟಡಗಳಿಗೆ ಈಗಿರುವಂತೆ ಸ್ಲಾಬ್‍ ದರ ಇರುವುದಿಲ್ಲ. ಯೂನಿಟ್ ದರ ಎಲ್ಲರಿಗೂ ಒಂದೇ ಮಾನದಂಡ ಆಗಿರುತ್ತದೆ’ ಎಂದರು.

ಖಾಸಗಿ ವ್ಯವಸ್ಥೆಯಲ್ಲಿ ತನೆಗೆ ಇಷ್ಟ ಬಂದವರನ್ನು ನೇಮಕ ಮಾಡುವ ಮತ್ತು ಕೆಲಸದಿಂದ ತೆಗೆದುಹಾಕುವ ಅಧಿಕಾರ ಅವರ ಕೈಯಲ್ಲಿರುತ್ತದೆ. ಆಕಸ್ಮಿಕವಾಗಿ ಮನೆಯ ವಿದ್ಯುತ್ ಕಡಿತಗೊಂಡರೆ ಸರ್ವಿಸ್ ಶುಲ್ಕ ನೀಡಬೇಕು. ಸಿಬ್ಬಂದಿಗೆ ಸಮಾನ ವೇತವು ಸಿಗುವುದಿಲ್ಲ’ ಎಂದು ದೂರಿದರು.

ದೊಡ್ಡಬಳ್ಳಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘದ ಕಾರ್ಯದರ್ಶಿ ರಘುನಂದನ್‌, ಚಿಕ್ಕಪ್ಪ, ನಗರ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಎನ್‌.ರೋಹಿತ್‌, ಗ್ರಾಮೀಣ ಭಾಗದ ಎಂಜಿನಿಯರ್‌ ಸಿ.ಮೋಹನ್‌ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT