ತಾಲ್ಲೂಕಿನ ವಾಜರಹಳ್ಳಿ-ಬ್ಯಾಡರಹಳ್ಳಿ ಕೆರೆ ಅಭಿವೃದ್ಧಿಗೆ ಮುಂದಾಗಿದ್ದು ಇದಕ್ಕಾಗಿಯೇ ಸಮಯ ಮೀಸಲಿಟ್ಟಿದ್ದಾರೆ. ಶಾಸಕ ನಿಸರ್ಗ ನಾರಾಯಣಸ್ವಾಮಿ ಹಾಗೂ ಜಿಲ್ಲಾಧಿಕಾರಿ ಕರೀಗೌಡರ ಮಾರ್ಗದರ್ಶನ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರು, ವಿಶ್ವನಾಥಪುರ, ಕೊಯಿರಾ, ವಾಜರಹಳ್ಳಿ-,ಬ್ಯಾಡರಹಳ್ಳಿ ಮುಖಂಡರ ಸಹಕಾರದೊಂದಿಗೆ ಈ ಕೆಲಸ ಆರಂಭಿಸಿದ್ದಾರೆ.