<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕಿನ ತೂಬಗೆರೆ ರಸ್ತೆಯ ರಾಮಯ್ಯನಪಾಳ್ಯ ಸಮೀಪ ಮಂಗಳವಾರ ಬೆಳಿಗ್ಗೆ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸವಾರರು ಮೃತಪಟ್ಟಿದ್ದಾರೆ.</p>.<p>ಮೃತರನ್ನು ಚಿಕ್ಕತಿಮ್ಮನಹಳ್ಳಿ ನಿವಾಸಿ ನಂದನ್ಕುಮಾರ್ (22) ಮತ್ತು ರವಿಕುಮಾರ್ (24) ಎಂದು ಗುರುತಿಸಲಾಗಿದೆ.</p>.<p>ದೊಡ್ಡಬಳ್ಳಾಪುರಕ್ಕೆ ಕೆಲಸಕ್ಕೆಂದು ದ್ವಿಚಕ್ರ ವಾಹನದಲ್ಲಿ ಬರುವ ವೇಳೆ ರಾಮಯ್ಯನಪಾಳ್ಯದ ಬಳಿ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿದೆ. ಬೈಕ್ನ ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದ ಯುವಕರ ಮೇಲೆ ಆಟೊ ಹರಿದು ಪರಾರಿಯಾಗಿದೆ ಎಂದು ಶಂಕಿಸಲಾಗಿದೆ.</p>.<p>ಅಪಘಾತ ಸ್ಥಳಕ್ಕೆ ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ಪ್ರಸಾದ್, ಡಿವೈಎಸ್ಪಿ ರವಿ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ಪಾಷಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p><strong>ರಸ್ತೆ ನಿರ್ವಹಣೆ ಕೊರತೆ: </strong>ನಗರದ ಮುದ್ದನಾಯಕನಪಾಳ್ಯದಿಂದ ತೂಬಗೆರೆ ಹೋಬಳಿ ಕೇಂದ್ರಕ್ಕೆ ಹೋಗುವ ಈ ರಸ್ತೆಯಲ್ಲಿ ಹತ್ತಾರು ಗ್ರಾಮಗಳ ಜನರು ಪ್ರತಿನಿತ್ಯ ಸಂಚರಿಸುತ್ತಾರೆ. ಅಲ್ಲದೆ ಗ್ರಾಮೀಣ ಭಾಗದ ಮೂಲಕ ಚಿಕ್ಕಬಳ್ಳಾಪುರಕ್ಕೆ ಹೋಗುವ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳು, ಲಾರಿಗಳು ಸಂಚರಿಸುತ್ತವೆ. ರಸ್ತೆಯ ಅಗಲ ಮಾತ್ರ ಕೇವಲ 20 ಅಡಿಗಳಷ್ಟು ಇದೆ.</p>.<p>ರಸ್ತೆಯ ಎರಡೂ ಬದಿಯಲ್ಲೂ ಪೊದೆ ಬೆಳೆದಿರುವುದರಿಂದ ರಸ್ತೆ ತಿರುವುಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ಓಡಾಡುವುದೇ ಕಷ್ಟವಾಗಿದೆ. ಈ ರಸ್ತೆಗೆ ಡಾಂಬರು ಹಾಕಿ ಸುಮಾರು ಒಂದುವರೆ ವರ್ಷವಷ್ಟೇ ಕಳೆದಿದೆ. ರಸ್ತೆ ತಿರುವುಗಳಲ್ಲಿ ಸೂಚನಾ ಫಲಕ ಇಲ್ಲ. ಕೆಂಪು ರೇಡಿಯಂ ಸ್ಟಿಕ್ಕರ್ಗಳು ಇಲ್ಲ. ರಸ್ತೆ ನಿಮಾರ್ಣ ಮಾಡಿದ ನಂತರ ಕನಿಷ್ಠ ಮೂರರಿಂದ ಐದು ವರ್ಷಗಳ ನಿರ್ವಹಣೆ ಇರುತ್ತದೆ. ಈ ರಸ್ತೆ ನಿರ್ವಹಣೆ ಇಲ್ಲದೆ ಇರುವುದೇ ಅಪಘಾತಗಳು ಹೆಚ್ಚಾಗಲು ಕಾರಣವಾಗಿದೆ ಎಂದು ಸ್ಥಳೀಯ ಯುವ ಮುಖಂಡ ಓಂಪ್ರಕಾಶ್ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕಿನ ತೂಬಗೆರೆ ರಸ್ತೆಯ ರಾಮಯ್ಯನಪಾಳ್ಯ ಸಮೀಪ ಮಂಗಳವಾರ ಬೆಳಿಗ್ಗೆ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸವಾರರು ಮೃತಪಟ್ಟಿದ್ದಾರೆ.</p>.<p>ಮೃತರನ್ನು ಚಿಕ್ಕತಿಮ್ಮನಹಳ್ಳಿ ನಿವಾಸಿ ನಂದನ್ಕುಮಾರ್ (22) ಮತ್ತು ರವಿಕುಮಾರ್ (24) ಎಂದು ಗುರುತಿಸಲಾಗಿದೆ.</p>.<p>ದೊಡ್ಡಬಳ್ಳಾಪುರಕ್ಕೆ ಕೆಲಸಕ್ಕೆಂದು ದ್ವಿಚಕ್ರ ವಾಹನದಲ್ಲಿ ಬರುವ ವೇಳೆ ರಾಮಯ್ಯನಪಾಳ್ಯದ ಬಳಿ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿದೆ. ಬೈಕ್ನ ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದ ಯುವಕರ ಮೇಲೆ ಆಟೊ ಹರಿದು ಪರಾರಿಯಾಗಿದೆ ಎಂದು ಶಂಕಿಸಲಾಗಿದೆ.</p>.<p>ಅಪಘಾತ ಸ್ಥಳಕ್ಕೆ ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ಪ್ರಸಾದ್, ಡಿವೈಎಸ್ಪಿ ರವಿ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ಪಾಷಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p><strong>ರಸ್ತೆ ನಿರ್ವಹಣೆ ಕೊರತೆ: </strong>ನಗರದ ಮುದ್ದನಾಯಕನಪಾಳ್ಯದಿಂದ ತೂಬಗೆರೆ ಹೋಬಳಿ ಕೇಂದ್ರಕ್ಕೆ ಹೋಗುವ ಈ ರಸ್ತೆಯಲ್ಲಿ ಹತ್ತಾರು ಗ್ರಾಮಗಳ ಜನರು ಪ್ರತಿನಿತ್ಯ ಸಂಚರಿಸುತ್ತಾರೆ. ಅಲ್ಲದೆ ಗ್ರಾಮೀಣ ಭಾಗದ ಮೂಲಕ ಚಿಕ್ಕಬಳ್ಳಾಪುರಕ್ಕೆ ಹೋಗುವ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳು, ಲಾರಿಗಳು ಸಂಚರಿಸುತ್ತವೆ. ರಸ್ತೆಯ ಅಗಲ ಮಾತ್ರ ಕೇವಲ 20 ಅಡಿಗಳಷ್ಟು ಇದೆ.</p>.<p>ರಸ್ತೆಯ ಎರಡೂ ಬದಿಯಲ್ಲೂ ಪೊದೆ ಬೆಳೆದಿರುವುದರಿಂದ ರಸ್ತೆ ತಿರುವುಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ಓಡಾಡುವುದೇ ಕಷ್ಟವಾಗಿದೆ. ಈ ರಸ್ತೆಗೆ ಡಾಂಬರು ಹಾಕಿ ಸುಮಾರು ಒಂದುವರೆ ವರ್ಷವಷ್ಟೇ ಕಳೆದಿದೆ. ರಸ್ತೆ ತಿರುವುಗಳಲ್ಲಿ ಸೂಚನಾ ಫಲಕ ಇಲ್ಲ. ಕೆಂಪು ರೇಡಿಯಂ ಸ್ಟಿಕ್ಕರ್ಗಳು ಇಲ್ಲ. ರಸ್ತೆ ನಿಮಾರ್ಣ ಮಾಡಿದ ನಂತರ ಕನಿಷ್ಠ ಮೂರರಿಂದ ಐದು ವರ್ಷಗಳ ನಿರ್ವಹಣೆ ಇರುತ್ತದೆ. ಈ ರಸ್ತೆ ನಿರ್ವಹಣೆ ಇಲ್ಲದೆ ಇರುವುದೇ ಅಪಘಾತಗಳು ಹೆಚ್ಚಾಗಲು ಕಾರಣವಾಗಿದೆ ಎಂದು ಸ್ಥಳೀಯ ಯುವ ಮುಖಂಡ ಓಂಪ್ರಕಾಶ್ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>