<p><strong>ದೊಡ್ಡಬಳ್ಳಾಪುರ</strong>: ಮುಂಜಾನೆ ಮೂರು ಗಂಟೆ ಸಮಯದಲ್ಲಿ ಮುಸುಕು ಧರಿಸಿ ಬಂದಿದ್ದ ದುಷ್ಕರ್ಮಿಯೊಬ್ಬ ಮನೆ ಮುಂದೆ ನಿಲ್ಲಿಸಿದ ಕಾರು, ಕಾಂಪೌಂಡ್ ಒಳಗಿದ್ದ 8 ಬೈಕ್ಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಿಡಿಗೇಡಿ ಇಡೀ ಕೃತ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<p>ನಗರದ ಶ್ರೀನಗರದ ರೈಲ್ವೆ ಸ್ಟೇಷನ್ ಹಿಂಭಾಗದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ವಿದ್ಯುತ್ ಗುತ್ತಿಗೆದಾರರಾದ ಶಿವಕುಮಾರ್ ಮನೆ ಮುಂದೆ ನಿಲ್ಲಿಸಿದ್ದ ಓಮ್ಲಿ ಕಾರು ಮತ್ತು 8 ಬೈಕ್ಗಳು ಬೆಂಕಿಗೆ ಅಹುತಿಯಾಗಿವೆ. ಕಾಂಪೌಂಡ್ನಲ್ಲಿ ನಿಲ್ಲಿಸಿದ್ದ ಬೈಕ್ಗಳು ಹೊತ್ತಿ ಉರಿಯುತ್ತಿದ್ದನ್ನು ಗಮನಿಸಿದ ನೆರೆಹೊರೆ ಮನೆಯವರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಕಾಂಪೌಂಡ್ನಲ್ಲಿದ್ದ 8 ಬೈಕ್ಗಳು ಬೆಂಕಿಗಾಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.</p>.<p>ಬೈಕ್ನಲ್ಲಿ ಹೆಲ್ಮೆಟ್ ಧರಿಸಿದ ಬಂದ ಕಿಡಿಗೇಡಿ ಮೊದಲಿಗೆ ಶಿವಕುಮಾರ್ ಮನೆಯ ಮುಂದೆ ನಿಲ್ಲಿಸಿದ ಓಮ್ನಿ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿದ್ದಾನೆ. ಪಕ್ಕದ ಮನೆಯಕಾಂಪೌಂಡ್ ಹತ್ತಿ ಶಿವಕುಮಾರ್ ಕಾಂಪೌಂಡ್ ಒಳಗೆ ನುಗ್ಗಿ ಬೈಕ್ ಗಳಿಗೆ ಬೆಂಕಿ ಇಟ್ಟು ಪರಾರಿಯಾಗಿದ್ದಾನೆ.</p>.<p>ಕಿಡಿಗೇಡಿಯೊಬ್ಬ ವಾಹನಗಳಿಗೆ ಬೆಂಕಿ ಇಟ್ಟಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ಮುಂಜಾನೆ ಮೂರು ಗಂಟೆ ಸಮಯದಲ್ಲಿ ಮುಸುಕು ಧರಿಸಿ ಬಂದಿದ್ದ ದುಷ್ಕರ್ಮಿಯೊಬ್ಬ ಮನೆ ಮುಂದೆ ನಿಲ್ಲಿಸಿದ ಕಾರು, ಕಾಂಪೌಂಡ್ ಒಳಗಿದ್ದ 8 ಬೈಕ್ಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಿಡಿಗೇಡಿ ಇಡೀ ಕೃತ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<p>ನಗರದ ಶ್ರೀನಗರದ ರೈಲ್ವೆ ಸ್ಟೇಷನ್ ಹಿಂಭಾಗದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ವಿದ್ಯುತ್ ಗುತ್ತಿಗೆದಾರರಾದ ಶಿವಕುಮಾರ್ ಮನೆ ಮುಂದೆ ನಿಲ್ಲಿಸಿದ್ದ ಓಮ್ಲಿ ಕಾರು ಮತ್ತು 8 ಬೈಕ್ಗಳು ಬೆಂಕಿಗೆ ಅಹುತಿಯಾಗಿವೆ. ಕಾಂಪೌಂಡ್ನಲ್ಲಿ ನಿಲ್ಲಿಸಿದ್ದ ಬೈಕ್ಗಳು ಹೊತ್ತಿ ಉರಿಯುತ್ತಿದ್ದನ್ನು ಗಮನಿಸಿದ ನೆರೆಹೊರೆ ಮನೆಯವರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಕಾಂಪೌಂಡ್ನಲ್ಲಿದ್ದ 8 ಬೈಕ್ಗಳು ಬೆಂಕಿಗಾಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.</p>.<p>ಬೈಕ್ನಲ್ಲಿ ಹೆಲ್ಮೆಟ್ ಧರಿಸಿದ ಬಂದ ಕಿಡಿಗೇಡಿ ಮೊದಲಿಗೆ ಶಿವಕುಮಾರ್ ಮನೆಯ ಮುಂದೆ ನಿಲ್ಲಿಸಿದ ಓಮ್ನಿ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿದ್ದಾನೆ. ಪಕ್ಕದ ಮನೆಯಕಾಂಪೌಂಡ್ ಹತ್ತಿ ಶಿವಕುಮಾರ್ ಕಾಂಪೌಂಡ್ ಒಳಗೆ ನುಗ್ಗಿ ಬೈಕ್ ಗಳಿಗೆ ಬೆಂಕಿ ಇಟ್ಟು ಪರಾರಿಯಾಗಿದ್ದಾನೆ.</p>.<p>ಕಿಡಿಗೇಡಿಯೊಬ್ಬ ವಾಹನಗಳಿಗೆ ಬೆಂಕಿ ಇಟ್ಟಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>