‘ಕೇಂದ್ರದಲ್ಲಿ ಭ್ರಷ್ಟಾಚಾರ ರಹಿತವಾಗಿ ಪ್ರಧಾನಿ ನರೇಂದ್ರ ಮೋದಿ ಆಡಳಿತ ನಡೆಸಿದ್ದಾರೆ. ಸ್ವಚ್ಛ ಭಾರತ ಅಭಿಯಾನ, ಮೇಕ್ ಇನ್ ಇಂಡಿಯಾ, ಬೇಟಿ ಬಚಾವೋ ಬೇಟಿ ಪಡಾವೋ, ಜನಧನ್, ಸುಕನ್ಯಾ ಸಮೃದ್ಧಿ ಯೋಜನೆ, ಉಜ್ವಲ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ, ಆಯುಷ್ಮಾನ್ ಭವ ಯೋಜನೆ ಸೇರಿದಂತೆ ಸಾಕಷ್ಟು ಯೋಜನೆಗಳ ಮೂಲಕ ದೇಶದ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳೂ ನೆಮ್ಮದಿಯಾಗಿ ಜೀವನ ಮಾಡಲಿಕ್ಕೆ ಆಗುವಂತೆ ಮಾಡಿದ್ದಾರೆ’ ಎಂದರು.