ತಾಲ್ಲೂಕಿನ ಚಂದಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಜಾಪುರದಲ್ಲಿ ಏಪ್ರಿಲ್ 26ರಂದು ಚುನಾವಣೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಕಾಂಗ್ರೆಸ್ ಕಾರ್ಯಕರ್ತರಾದ ಮಧು ಮತ್ತು ಆಂಜಿನಪ್ಪ ಮಹಿಳಾ ಮತದಾರರಿಗೆ ಮತಗಟ್ಟೆಗೆ ಮಾರ್ಗವನ್ನು ತೋರಿಸುತ್ತಿದ್ದಾಗ ಬಿಜೆಪಿಯ ಕೆಲ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಸಂದರ್ಭದಲ್ಲಿ ಪರಸ್ಪರ ವಾಗ್ವಾದ ನಡೆದಿತ್ತು ಎಂದು ತಿಳಿಸಿದರು.