ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ದಲಿತ ವಿರೋಧಿ ಅಲ್ಲ: ಛಲವಾದಿ ನಾರಾಯಣಸ್ವಾಮಿ

Last Updated 1 ಫೆಬ್ರುವರಿ 2021, 5:36 IST
ಅಕ್ಷರ ಗಾತ್ರ

ದೇವನಹಳ್ಳಿ: ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ದಲಿತ ವಿರೋಧಿ ಎಂದು ಬಿಂಬಿಸುತ್ತಿರುವುದು ಬರೀ ಕಲ್ಪನೆ ಎಂದು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅರೋಪಿಸಿ
ದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ನರೇಂದ್ರ ಮೋದಿ ದೇಶದ ಪ್ರಧಾನ ಮಂತ್ರಿಯಾದರೆ ಸಂವಿಧಾನ ಬದಲಾಯಿಸಲಿದ್ದಾರೆ. ದಲಿತರ ಮೀಸಲಾತಿ ತೆಗೆದು ಹಾಕಲಿದ್ದಾರೆ. ಸವಲತ್ತು ಕಸಿದುಕೊಳ್ಳಲಿದ್ದಾರೆ. ಬಿಜೆಪಿ ಒಂದು ಸಮುದಾಯಕ್ಕೆ ಸೀಮಿತವಾಗಿದೆ. ಅಲ್ಪಸಂಖ್ಯಾತರ ವಿರೋಧಿ ಎಂಬ ಊಹಾ
ಪೋಹ ಆರೋಪಗಳು ನಿರಂತರವಾಗಿ ಮುಂದುವರೆದಿದೆ. ನಿಜವಾಗಿಯೂ ಬಿಜೆಪಿ ದಲಿತರ ಪರವಾಗಿ ಕೆಲಸ ಮಾಡುತ್ತಿದೆ ಎಂದರು.

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಕೃಷಿ ಕಾಯ್ದೆ ವಿರೋಧಿಸಿ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಗುರಿಯನ್ನಾಗಿಸಿ ಎಂಬುವುದು ಮಾತ್ರ ಸತ್ಯ ಎಂದು ಅವರು
ಹೇಳಿದರು.

ಕೆಲವೇ ದಿನಗಳಲ್ಲಿ ರಾಜ್ಯದ ಬಜೆಟ್ ಮಂಡನೆಯಾಗಲಿದೆ. ದಲಿತರ ಸಮಸ್ಯೆ ಮತ್ತು ಅವರಿಗೆ ಸಿಗಬೇಕಾದ ಮತ್ತಷ್ಟು ಸೌಲಭ್ಯ ಕುರಿತು ರಾಜ್ಯ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಮಾಹಿತಿ ಪಡೆಯಲಾಗುವುದು ಎಂದು ಹೇಳಿದರು.

ಬಿಜೆಪಿ ಪ‍ರಿಶಿಷ್ಟ ಮೋರ್ಚಾ ರಾಜ್ಯ ಘಟಕ ಉಪಾಧ್ಯಕ್ಷ ಕೆ.ನಾಗೇಶ್, ಜಿಲ್ಲಾ ಪರಿಶಿಷ್ಟ ಜಾತಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಣೇಶ್ ಬಾಬು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಎಚ್. ಎಂ.ರವಿಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ತಾಲ್ಲೂಕು ಘಟಕ ಉಪಾಧ್ಯಕ್ಷೆ ಪುನಿತಾ, ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ನಾಗವೇಣಿ, ತಾಲ್ಲೂಕು ಘಟಕ ಪ್ರಧಾನ ಕಾರ್ಯದರ್ಶಿ ನಿಲೇರಿ ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT