<p><strong>ದೇವನಹಳ್ಳಿ:</strong> ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಶನಿವಾರ ತಾಲ್ಲೂಕಿನ ಜಿಲ್ಲಾಡಳಿತ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.</p>.<p>ಬಿಜೆಪಿ ಪಕ್ಷದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅನುರೆಡ್ಡಿ, ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಹೊರತು ವೈದ್ಯರ ನಿರ್ಲಕ್ಷ್ಯ ಅಲ್ಲ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಾವುಗಳನ್ನು ತಡೆಯಲು ಸಾಧ್ಯವಾಗಲಿಲ್ಲ ಎಂದು ಹರಿಹಾಯ್ದರು.</p>.<p>ವೈದ್ಯಕೀಯ ಆರೈಕೆಯನ್ನು ಗುಣಮಟ್ಟದಲ್ಲಿ ನೀಡಲು ಸೋತ್ತಿರುವ ರಾಜ್ಯ ಸರ್ಕಾರ, ಬಾಣಂತಿಯರ ಸಾವಿಗೆ ₹5 ಲಕ್ಷ ಪರಿಹಾರ ಮೊತ್ತವನ್ನು ಕಟ್ಟಿದೆ. ಜನ್ಮದಾತೆಯಾಗಿರುವ ಮಹಿಳೆಯರ ಸಾವನ್ನು ಹಣದಿಂದ ಅಳೆಯುತ್ತಿರುವ ರಾಜ್ಯ ಸರ್ಕಾರದ ವರ್ತನೆಗೆ ಧಿಕ್ಕಾರವಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕೆಲಸವಾಗುತ್ತಿಲ್ಲ. ಸರ್ಕಾರದಿಂದ ಪ್ರಜೆಗಳ ಆರೋಗ್ಯವನ್ನು ಕಾಪಾಡಲು ಆಗದ ಪರಿಸ್ಥಿತಿಗೆ ತಲುಪಸಿದ್ದಾರೆ. ಪಂಚ ಗ್ಯಾರೆಂಟಿಗಳ ಜನರ ಜೀವನಕ್ಕೆ ಮಾರಕವಾಗುತ್ತಿದೆ. ಇದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.</p>.<p>ಬಿಟ್ಟಿ ಭಾಗ್ಯಗಳಿಂದ ರಾಜ್ಯದ ಜನರಿಗೆ ಸೂಕ್ತವಾದ ಸೌಲಭ್ಯಗಳು ಸಮಯಕ್ಕೆ ದೊರೆಯುತ್ತಿಲ್ಲ. ಬಡವರ ಸಾವಿಗೆ ರಾಜ್ಯ ಸರ್ಕಾರವೇ ಕಾರಣವಾಗಿದೆ. ಅಭಿವೃದ್ಧಿಗೆ ಮಾರಕವಾಗಿರುವ ಕಾಂಗ್ರೆಸ್ ಸರ್ಕಾರವೂ ತೋಲಗುವವರೆಗೂ ನಿರಂತರವಾಗಿ ಹೋರಾಟ ಮಾಡುತ್ತೇವೆ ಎಂದರು.</p>.<p>ಗ್ಯಾರಂಟಿ ಹೆಸರಿನಲ್ಲಿ ದುಡ್ಡು ಹೊಡೆಯುತ್ತಿರುವ ಕಾಂಗ್ರೆಸ್ಸಿಗರ ಹಗರಣ ತಿಂಗಳಿಗೊಂದರಂತೆ ಬೆಳಕಿಗೆ ಬರುತ್ತಿದೆ. ಬಾಣಂತಿಯರ ಸಾವಿನಿಂದಾಗಿ ಅನಥರಾದ ಮಕ್ಕಳ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ಹೊತ್ತು, ಅವರನ್ನು ದತ್ತು ತೆಗೆದುಕೊಂಡು ಪೋಷಿಸಬೇಕು ಎಂದು ಒತ್ತಾಯಿಸಿದರು.</p>.<p>ಗುಣಮಟ್ಟದ ಆರೋಗ್ಯ ಸೌಲಭ್ಯ, ಮಹಿಳೆಯರಿಗೆ ರಕ್ಷಣೆ ನೀಡಲು ಆಗದೇ ಇದ್ದರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.</p>.<p>ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ತೊಲಗಲಿ ಮಹಿಳೆಯರಿಗೆ ರಕ್ಷಣೆ ಸಿಗಲಿ ಎಂದು ಘೋಷಣೆಗಳನ್ನು ಮಹಿಳಾ ಪದಾಧಿಕಾರಿಗಳು ಕೂಗಿದರು.</p>.<p>ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನಾಗವೇಣಿ, ನೆಲಮಂಗಲ ತಾಲ್ಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ,ವಿಮಲಾ ಶಿವಕುಮಾರ್, ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ಸುಂದರೇಶ್, ಎಚ್.ಎಂ. ರವಿ ಕುಮಾರ್, ಆರ್.ಕೆ.ನಂಜೇಗೌಡ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಶನಿವಾರ ತಾಲ್ಲೂಕಿನ ಜಿಲ್ಲಾಡಳಿತ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.</p>.<p>ಬಿಜೆಪಿ ಪಕ್ಷದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅನುರೆಡ್ಡಿ, ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಹೊರತು ವೈದ್ಯರ ನಿರ್ಲಕ್ಷ್ಯ ಅಲ್ಲ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಾವುಗಳನ್ನು ತಡೆಯಲು ಸಾಧ್ಯವಾಗಲಿಲ್ಲ ಎಂದು ಹರಿಹಾಯ್ದರು.</p>.<p>ವೈದ್ಯಕೀಯ ಆರೈಕೆಯನ್ನು ಗುಣಮಟ್ಟದಲ್ಲಿ ನೀಡಲು ಸೋತ್ತಿರುವ ರಾಜ್ಯ ಸರ್ಕಾರ, ಬಾಣಂತಿಯರ ಸಾವಿಗೆ ₹5 ಲಕ್ಷ ಪರಿಹಾರ ಮೊತ್ತವನ್ನು ಕಟ್ಟಿದೆ. ಜನ್ಮದಾತೆಯಾಗಿರುವ ಮಹಿಳೆಯರ ಸಾವನ್ನು ಹಣದಿಂದ ಅಳೆಯುತ್ತಿರುವ ರಾಜ್ಯ ಸರ್ಕಾರದ ವರ್ತನೆಗೆ ಧಿಕ್ಕಾರವಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕೆಲಸವಾಗುತ್ತಿಲ್ಲ. ಸರ್ಕಾರದಿಂದ ಪ್ರಜೆಗಳ ಆರೋಗ್ಯವನ್ನು ಕಾಪಾಡಲು ಆಗದ ಪರಿಸ್ಥಿತಿಗೆ ತಲುಪಸಿದ್ದಾರೆ. ಪಂಚ ಗ್ಯಾರೆಂಟಿಗಳ ಜನರ ಜೀವನಕ್ಕೆ ಮಾರಕವಾಗುತ್ತಿದೆ. ಇದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.</p>.<p>ಬಿಟ್ಟಿ ಭಾಗ್ಯಗಳಿಂದ ರಾಜ್ಯದ ಜನರಿಗೆ ಸೂಕ್ತವಾದ ಸೌಲಭ್ಯಗಳು ಸಮಯಕ್ಕೆ ದೊರೆಯುತ್ತಿಲ್ಲ. ಬಡವರ ಸಾವಿಗೆ ರಾಜ್ಯ ಸರ್ಕಾರವೇ ಕಾರಣವಾಗಿದೆ. ಅಭಿವೃದ್ಧಿಗೆ ಮಾರಕವಾಗಿರುವ ಕಾಂಗ್ರೆಸ್ ಸರ್ಕಾರವೂ ತೋಲಗುವವರೆಗೂ ನಿರಂತರವಾಗಿ ಹೋರಾಟ ಮಾಡುತ್ತೇವೆ ಎಂದರು.</p>.<p>ಗ್ಯಾರಂಟಿ ಹೆಸರಿನಲ್ಲಿ ದುಡ್ಡು ಹೊಡೆಯುತ್ತಿರುವ ಕಾಂಗ್ರೆಸ್ಸಿಗರ ಹಗರಣ ತಿಂಗಳಿಗೊಂದರಂತೆ ಬೆಳಕಿಗೆ ಬರುತ್ತಿದೆ. ಬಾಣಂತಿಯರ ಸಾವಿನಿಂದಾಗಿ ಅನಥರಾದ ಮಕ್ಕಳ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ಹೊತ್ತು, ಅವರನ್ನು ದತ್ತು ತೆಗೆದುಕೊಂಡು ಪೋಷಿಸಬೇಕು ಎಂದು ಒತ್ತಾಯಿಸಿದರು.</p>.<p>ಗುಣಮಟ್ಟದ ಆರೋಗ್ಯ ಸೌಲಭ್ಯ, ಮಹಿಳೆಯರಿಗೆ ರಕ್ಷಣೆ ನೀಡಲು ಆಗದೇ ಇದ್ದರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.</p>.<p>ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ತೊಲಗಲಿ ಮಹಿಳೆಯರಿಗೆ ರಕ್ಷಣೆ ಸಿಗಲಿ ಎಂದು ಘೋಷಣೆಗಳನ್ನು ಮಹಿಳಾ ಪದಾಧಿಕಾರಿಗಳು ಕೂಗಿದರು.</p>.<p>ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನಾಗವೇಣಿ, ನೆಲಮಂಗಲ ತಾಲ್ಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ,ವಿಮಲಾ ಶಿವಕುಮಾರ್, ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ಸುಂದರೇಶ್, ಎಚ್.ಎಂ. ರವಿ ಕುಮಾರ್, ಆರ್.ಕೆ.ನಂಜೇಗೌಡ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>