ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲಾ ಸ್ಥಾನದಲ್ಲೂ ಗೆಲುವು: ನಾಗೇಶ್

Last Updated 23 ಅಕ್ಟೋಬರ್ 2020, 2:42 IST
ಅಕ್ಷರ ಗಾತ್ರ

ಕೆಜಿಎಫ್‌: ‘ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಚಿದಾನಂದಗೌಡರು ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಗೆಲ್ಲುತ್ತಾರೆ. ಎಲ್ಲಾ ನಾಲ್ಕು ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ’ ಎಂದು ಸಚಿವ ನಾಗೇಶ್‌ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಕಾರ್ಯಕರ್ತರು ಶಿಸ್ತಿನಿಂದ ಕೆಲಸ ಮಾಡುತ್ತಿದ್ದಾರೆ. ಪಕ್ಷದ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಸಂಶಯವಿಲ್ಲ. ಅವರೊಟ್ಟಿಗೆ ಖುದ್ದಾಗಿ ಮಾತನಾಡಿ ಮತ ಕೇಳುವುದು ಕಾರ್ಯಕರ್ತರ ಕರ್ತವ್ಯವಾಗಿದೆ ಎಂದರು.

ಚಿನ್ನದ ಗಣಿಯನ್ನು ಪುನರಾರಂಭ ಮಾಡಲು ಕೇಂದ್ರ ಸರ್ಕಾರ ಒಲವು ತೋರಿದೆ. ಈಗಾಗಲೇ ಚಿನ್ನದ ನಿಕ್ಷೇಪಗಳ ಪತ್ತೆಗೆ ಕಾರ್ಯಾಚರಣೆ ನಡೆದಿದೆ. ಇನ್ನೂ ಹಲವಾರು ಅಭಿವೃದ್ಧಿ ಕಾಮಗಾರಿಗಳು ಕೆಜಿಎಫ್‌ ನಗರದಲ್ಲಿ ನಡೆಯಲಿವೆ ಎಂದು |
ಹೇಳಿದರು.

ಮುಖಂಡರಾದ ಕಮಲನಾಥನ್‌, ಕೃಷ್ಣಮೂರ್ತಿ, ಸುರೇಶ್ ನಾರಾಯಣಕುಟ್ಟಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT