ಕೆಜಿಎಫ್: ‘ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಚಿದಾನಂದಗೌಡರು ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಗೆಲ್ಲುತ್ತಾರೆ. ಎಲ್ಲಾ ನಾಲ್ಕು ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ’ ಎಂದು ಸಚಿವ ನಾಗೇಶ್ ಹೇಳಿದರು.
ನಗರದಲ್ಲಿ ಮಂಗಳವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಕಾರ್ಯಕರ್ತರು ಶಿಸ್ತಿನಿಂದ ಕೆಲಸ ಮಾಡುತ್ತಿದ್ದಾರೆ. ಪಕ್ಷದ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಸಂಶಯವಿಲ್ಲ. ಅವರೊಟ್ಟಿಗೆ ಖುದ್ದಾಗಿ ಮಾತನಾಡಿ ಮತ ಕೇಳುವುದು ಕಾರ್ಯಕರ್ತರ ಕರ್ತವ್ಯವಾಗಿದೆ ಎಂದರು.
ಚಿನ್ನದ ಗಣಿಯನ್ನು ಪುನರಾರಂಭ ಮಾಡಲು ಕೇಂದ್ರ ಸರ್ಕಾರ ಒಲವು ತೋರಿದೆ. ಈಗಾಗಲೇ ಚಿನ್ನದ ನಿಕ್ಷೇಪಗಳ ಪತ್ತೆಗೆ ಕಾರ್ಯಾಚರಣೆ ನಡೆದಿದೆ. ಇನ್ನೂ ಹಲವಾರು ಅಭಿವೃದ್ಧಿ ಕಾಮಗಾರಿಗಳು ಕೆಜಿಎಫ್ ನಗರದಲ್ಲಿ ನಡೆಯಲಿವೆ ಎಂದು | ಹೇಳಿದರು.