ದೊಡ್ಡಬಳ್ಳಾಪುರ ಸಾಹಿತ್ಯ ಪರಿಷತ್ ನಿರ್ದೇಶಕ ವಿ.ಕಿರಣ್ ಮಾತನಾಡಿ, ಜಿಲ್ಲಾ ಕಸಾಪ ಘಟಕದಿಂದ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗುತ್ತಿದೆ. ಜಿಲ್ಲಾ ಘಟಕದ ಅಧ್ಯಕ್ಷ ಏಕಚಕ್ರಾಧಿಪತ್ಯ ನಡೆಸುತ್ತಿದ್ದಾರೆ. 22ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಂದ 23ನೇ ಸಮ್ಮೇಳನಾಧ್ಯಕ್ಷರಿಗೆ ಕನ್ನಡದ ಬಾವುಟ ಹಸ್ತಾಂತರಿಸುವುದು ಶಿಷ್ಟಾಚಾರ, ಸಮ್ಮೇಳನವೇ ನಡೆಯದೇ ಇರುವಾಗ ಹಸ್ತಾಂತರ ಮಾಡುವವರು ಯಾರು, ಈ ವಿಚಾರ ಅವರಿಗೆ ಗೊತ್ತಿದ್ದರೂ ತ.ನಾ.ಪ್ರಭುದೇವ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದರು.