ಭಾರತೀಯ ರೆಡ್ಕ್ರಾಸ್ ಸಂಸ್ಥೆ ವೈದ್ಯಾಧಿಕಾರಿ ಡಾ.ಎಂ.ಪ್ರಸಾದ್ ಮಾತನಾಡಿ, ‘ರಕ್ತಕ್ಕೆ ಪರ್ಯಾಯ ವಸ್ತುವಿಲ್ಲ. ಕೃತಕವಾಗಿ ಅದನ್ನು ಉತ್ಪಾದಿಸಲು ಸಾಧ್ಯವಿಲ್ಲ. ತಮ್ಮ ದೇಹದ ರಕ್ತವನ್ನು ಪರೀಕ್ಷಿಸಿ ಯಾವ ಗುಂಪು ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು. ರಕ್ತ ಪರೀಕ್ಷೆಯಿಂದ ಮಾರಕ ರೋಗಗಳ ಬಗ್ಗೆ ಖಚಿತ ಮಾಹಿತಿ ಲಭ್ಯವಾಗುತ್ತದೆ. ರಕ್ತದಾನ ಮಾಡುವುದರಿಂದ ಜ್ಞಾಪಕ ಶಕ್ತಿ ವೃದ್ಧಿ, ಕೊಬ್ಬಿನಂಶ, ಹೃದಯಾಘಾತ ಮತ್ತು ರಕ್ತದ ಒತ್ತಡ ಕಡಿಮೆ ಮಾಡಲು ಸಹಕಾರಿಯಾಗುವುದರ ಜೊತೆಗೆ ಮತ್ತೊಬ್ಬರ ಪ್ರಾಣ ಉಳಿಸಿದ ಸಾರ್ಥಕತೆ ಸಿಗುತ್ತದೆ’ ಎಂದು ಹೇಳಿದರು.