ಕೊರೊನಾ ಸೋಂಕು ಭೀತಿ ಹಾಗೂ ಲಾಕ್ ಡೌನ್ನಿಂದಾಗಿ ರಾಜ್ಯದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಗರ್ಭಿಣಿಯರು, ಬಾಣಂತಿಯರು, ಅಪಘಾತಕ್ಕೊಳಗಾದವರು, ರಕ್ತ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸಮರ್ಪಕವಾಗಿ ರಕ್ತವನ್ನು ಒದಗಿಸಲು ಸಾಧ್ಯವಾಗದಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.