<p><strong>ದೊಡ್ಡಗಟ್ಟಿಗನಬ್ಬೆ (ಹೊಸಕೋಟೆ):</strong> ‘ರಸ್ತೆ ಸುರಕ್ಷತೆ ಕೇವಲ ನಿಯಮಗಳ ಪಾಲನೆಯಲ್ಲ. ಅದು ಜೀವ ಉಳಿಸುವ ಜವಾಬ್ದಾರಿಯೂ ಹೌದು. ಅಪಘಾತಕ್ಕೀಡಾದ ಅನಿರೀಕ್ಷಿತ ಸಂತ್ರಸ್ತರಿಗೆ ರಕ್ತ ನೀಡುವುದು ಶ್ರೇಷ್ಠ ಸೇವೆ’ ಎಂದು ಸುಗುಣ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಹಿರಿಯ ವ್ಯವಸ್ಥಾಪಕ ಫ್ರಾನ್ಸಿಸ್ ಪ್ರವೀಣ್ ಹೇಳಿದರು.</p>.<p>ತಾಲ್ಲೂಕಿನ ದೊಡ್ಡ ಗಟ್ಟಿಗನಬ್ಬೆ ಬಳಿ ಇರುವ ಸುಗುಣ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಆವರಣದಲ್ಲಿ ಸರ್.ಸಿ.ವಿ.ರಾಮನ್ ಜನರಲ್ ಆಸ್ಪತ್ರೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.</p>.<p>ರಸ್ತೆ ಅಪಘಾತಗಳಲ್ಲಿ ಸಕಾಲಕ್ಕೆ ರಕ್ತ ಸಿಗದೆ ಸಾವು ಸಂಭವಿಸುತ್ತಿರುವುದನ್ನು ತಪ್ಪಿಸಲು ರಕ್ತದಾನಕ್ಕೆ ಮುಂದಾಗಬೇಕು. ಶಿಬಿರದಲ್ಲಿ 35 ಯೂನಿಟ್ ರಕ್ತ ಸಂಗ್ರಹವಾಗಿದೆ. ಕಾರ್ಮಿಕರು ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.</p>.<p>ಸಿ.ವಿ. ರಾಮನ್ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶೀಲಾ ಮಾತನಾಡಿ, ಕಾರ್ಮಿಕರು ತಮ್ಮ ದಿನನಿತ್ಯದ ಕಷ್ಟದ ಕೆಲಸದ ನಡುವೆಯೂ ಇಂತಹ ಸಾಮಾಜಿಕ ಕಳಕಳಿ ಮೆರೆದಿರುವುದು ಮೆಚ್ಚುವಂತಹದ್ದು ಎಂದರು</p>.<p>ಬಾಲಾಜಿ, ಕೃಷ್ಣಮೂರ್ತಿ, ಬಾಲು, ಗಿರಿಧರನ್, ಹೊಸಕೋಟೆ ಸರ್ಕಾರಿ ಆಸ್ಪತ್ರೆ ಪ್ರಯೋಗಾಲಯದ ರಕ್ತ ಸಂಗ್ರಹ ಘಟಕದ ಅಧಿಕಾರಿ ಶುಭಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಗಟ್ಟಿಗನಬ್ಬೆ (ಹೊಸಕೋಟೆ):</strong> ‘ರಸ್ತೆ ಸುರಕ್ಷತೆ ಕೇವಲ ನಿಯಮಗಳ ಪಾಲನೆಯಲ್ಲ. ಅದು ಜೀವ ಉಳಿಸುವ ಜವಾಬ್ದಾರಿಯೂ ಹೌದು. ಅಪಘಾತಕ್ಕೀಡಾದ ಅನಿರೀಕ್ಷಿತ ಸಂತ್ರಸ್ತರಿಗೆ ರಕ್ತ ನೀಡುವುದು ಶ್ರೇಷ್ಠ ಸೇವೆ’ ಎಂದು ಸುಗುಣ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಹಿರಿಯ ವ್ಯವಸ್ಥಾಪಕ ಫ್ರಾನ್ಸಿಸ್ ಪ್ರವೀಣ್ ಹೇಳಿದರು.</p>.<p>ತಾಲ್ಲೂಕಿನ ದೊಡ್ಡ ಗಟ್ಟಿಗನಬ್ಬೆ ಬಳಿ ಇರುವ ಸುಗುಣ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಆವರಣದಲ್ಲಿ ಸರ್.ಸಿ.ವಿ.ರಾಮನ್ ಜನರಲ್ ಆಸ್ಪತ್ರೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.</p>.<p>ರಸ್ತೆ ಅಪಘಾತಗಳಲ್ಲಿ ಸಕಾಲಕ್ಕೆ ರಕ್ತ ಸಿಗದೆ ಸಾವು ಸಂಭವಿಸುತ್ತಿರುವುದನ್ನು ತಪ್ಪಿಸಲು ರಕ್ತದಾನಕ್ಕೆ ಮುಂದಾಗಬೇಕು. ಶಿಬಿರದಲ್ಲಿ 35 ಯೂನಿಟ್ ರಕ್ತ ಸಂಗ್ರಹವಾಗಿದೆ. ಕಾರ್ಮಿಕರು ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.</p>.<p>ಸಿ.ವಿ. ರಾಮನ್ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶೀಲಾ ಮಾತನಾಡಿ, ಕಾರ್ಮಿಕರು ತಮ್ಮ ದಿನನಿತ್ಯದ ಕಷ್ಟದ ಕೆಲಸದ ನಡುವೆಯೂ ಇಂತಹ ಸಾಮಾಜಿಕ ಕಳಕಳಿ ಮೆರೆದಿರುವುದು ಮೆಚ್ಚುವಂತಹದ್ದು ಎಂದರು</p>.<p>ಬಾಲಾಜಿ, ಕೃಷ್ಣಮೂರ್ತಿ, ಬಾಲು, ಗಿರಿಧರನ್, ಹೊಸಕೋಟೆ ಸರ್ಕಾರಿ ಆಸ್ಪತ್ರೆ ಪ್ರಯೋಗಾಲಯದ ರಕ್ತ ಸಂಗ್ರಹ ಘಟಕದ ಅಧಿಕಾರಿ ಶುಭಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>