ದೊಡ್ಡಬಳ್ಳಾಪುರ: ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ರಾಜ್ಯ ಯುವ ಘಟಕದ ವತಿಯಿಂದ ಆ. 8ರಂದು ಬೆಳಿಗ್ಗೆ 11 ಗಂಟೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ಬಡ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ ನಡೆಯಲಿದೆ.
ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿನ ಡಿ.ಪಿ.ವಿ ಕನ್ವೇಷನ್ ಹಾಲ್ನಲ್ಲಿ ನಡೆಯುವ ಸಮಾರಂಭವನ್ನು ಶಿವಗಂಗೆಯ ಹೊನ್ನಮ್ಮಗವಿ ಮಠದ ರುದ್ರಮುನಿ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.
ಕಾರ್ಯಾಗಾರ ದೊಡ್ಡಬಳ್ಳಾಪುರ: ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಪ್ರಜಾ ವಿಮೋಚನ ಚಳವಳಿ (ಸಮತಾವಾದ) ವತಿಯಿಂದ ಆ. 8ರಂದು ಬೆಳಿಗ್ಗೆ 11 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ‘ಡಾ.ಬಿ.ಆರ್. ಅಂಬೇಡ್ಕರ್ ಅವರ ರಾಜಕೀಯ ಚಿಂತನೆ ಮತ್ತು ಪರ್ಯಾಯ ರಾಜಕಾರಣ’ ಕುರಿತು ಜಿಲ್ಲಾ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ ನಡೆಯಲಿದೆ.
ಕಾರ್ಯಾಗಾರವನ್ನು ಆರ್ಪಿಐ ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ. ವೆಂಕಟಸ್ವಾಮಿ ಉದ್ಘಾಟಿಸಲಿದ್ದಾರೆ. ಬಸವರಾಜು ಇಂಡ್ಲವಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖಂಡರಾದ ಮು. ತಿಮ್ಮಯ್ಯ, ಎಂ. ಲಗುಮಯ್ಯ, ಸಿ. ಮುನಿಯಪ್ಪ ಭಾಗವಹಿಸಲಿದ್ದಾರೆ.