ಸದಾ ಜನದಟ್ಟಣೆಯಿಂದ ತುಂಬಿರುತ್ತಿದ್ದ ಪಟ್ಟಣದ ಬಸ್ನಿಲ್ದಾಣದಲ್ಲಿ ಪ್ರಯಾಣಿಕರ ಕೊರತೆ ಇತ್ತು. ಸಾರಿಗೆ ಬಸ್ಗಳು ಮತ್ತು ಬಿಎಂಟಿಸಿ ಬಸ್ಗಳು ರಸ್ತೆಗಿಳಿಯಲಿಲ್ಲ. ಸರ್ಕಾರ ಖಾಸಗಿ ಬಸ್ ಸಂಚಾರದ ವ್ಯವಸ್ಥೆ ಮಾಡಿದ್ದರೂ ದುಪ್ಪಟ್ಟು ದರ ನೀಡಿ ನಿರ್ವಾಹಕರನ್ನು ಶಪಿಸುತ್ತಲೇ ಪ್ರಯಾಣಿಕರು ತೆರಳಿದರು. ಕೆಲವು ಪ್ರಯಾಣಿಕರು ನಿಗದಿತ ಸಮಯಕ್ಕೆ ತುರ್ತಾಗಿ ಹೋಗಬೇಕಾದ ಅನಿವಾರ್ಯತೆಯಿಂದ ಖಾಸಗಿ ಬಸ್ ಹತ್ತಿ ತೆರಳುತ್ತಿದ್ದುದು ಸಾಮಾನ್ಯವಾಗಿತ್ತು.