<p><strong>ವಿಜಯಪುರ (ದೇವನಹಳ್ಳಿ):</strong> ಪಟ್ಟಣದಿಂದ ಬೆಳಗ್ಗೆ 5ಕ್ಕೆ ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಈಗ ಬೆಳಗಿನ ಜಾವ 4.30ಕ್ಕೆ ಹೊರಡಲಿದೆ ಎಂದು ದೇವನಹಳ್ಳಿ ಬಿಎಂಟಿಸಿ ವ್ಯವಸ್ಥಾಪಕ ಶಮೂನ್ ಪಾಷಾ ತಿಳಿಸಿದ್ದಾರೆ.<br /><br /> ಅಲ್ಲದೇ ಬೆಳಗ್ಗೆ 6ಕ್ಕೆ ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ಬೂದಿಗೆರೆ, ಬಾಗಲೂರು ಕಡೆಯಿಂದ ವಿಜಯಪುರಕ್ಕೆ ಬಸ್ ಸಂಚಾರ ಆರಂಭಗೊಂಡಿದೆ. ಮಧ್ಯಾಹ್ನ 3 ಗಂಟೆಗೆ ವಿಜಯಪುರ ಬಸ್ ನಿಲ್ದಾಣದಿಂದ ಬೂದಿಗೆರೆ, ಬಾಗಲೂರು, ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬಿಎಂಟಿಸಿ ಬಸ್ ಸಂಚರಿಸಲಿದೆ ಎಂದು ಹೇಳಿದ್ದಾರೆ.<br /><br />ವಿಜಯಪುರದಿಂದ ಈ ಹಿಂದೆ ಹೊಸಕೋಟೆ, ವೈಟ್ ಫೀಲ್ಡ್, ವರ್ತೂರು ಕೋಡಿ, ಮಾರತಳ್ಳಿ ಮುಖಾಂತರ ಬೆಂಗಳೂರಿನ ಕಲಾಸಿಪಾಳ್ಯದ ಕೃಷ್ಣರಾಜೇಂದ್ರ ಮಾರುಕಟ್ಟೆಗೆ ಖಾಸಗಿ ಮತ್ತು ಸರ್ಕಾರಿ ಬಸ್ ಸಂಚರಿಸುತ್ತಿದ್ದವು. ಈಗ ಸಂಚಾರ ಸ್ಥಗಿತಗೊಂಡಿರುವ ಕಾರಣ ಪ್ರಯಾಣಿಕರಿಗೆ ತೊಂದರೆಯಾಗಿದೆ. ಈ ಭಾಗಕ್ಕೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪಟ್ಟಣದಿಂದ ಚಿಕ್ಕಬಳ್ಳಾಪುರಕ್ಕೆ ಶಾಲೆ,ಕಾಲೇಜು ಆರಂಭ ಮತ್ತು ಬಿಡುವಿನ ವೇಳೆ ಬಿಎಂಟಿಸಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಪ್ರಯಾಣಿಕರ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ):</strong> ಪಟ್ಟಣದಿಂದ ಬೆಳಗ್ಗೆ 5ಕ್ಕೆ ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಈಗ ಬೆಳಗಿನ ಜಾವ 4.30ಕ್ಕೆ ಹೊರಡಲಿದೆ ಎಂದು ದೇವನಹಳ್ಳಿ ಬಿಎಂಟಿಸಿ ವ್ಯವಸ್ಥಾಪಕ ಶಮೂನ್ ಪಾಷಾ ತಿಳಿಸಿದ್ದಾರೆ.<br /><br /> ಅಲ್ಲದೇ ಬೆಳಗ್ಗೆ 6ಕ್ಕೆ ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ಬೂದಿಗೆರೆ, ಬಾಗಲೂರು ಕಡೆಯಿಂದ ವಿಜಯಪುರಕ್ಕೆ ಬಸ್ ಸಂಚಾರ ಆರಂಭಗೊಂಡಿದೆ. ಮಧ್ಯಾಹ್ನ 3 ಗಂಟೆಗೆ ವಿಜಯಪುರ ಬಸ್ ನಿಲ್ದಾಣದಿಂದ ಬೂದಿಗೆರೆ, ಬಾಗಲೂರು, ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬಿಎಂಟಿಸಿ ಬಸ್ ಸಂಚರಿಸಲಿದೆ ಎಂದು ಹೇಳಿದ್ದಾರೆ.<br /><br />ವಿಜಯಪುರದಿಂದ ಈ ಹಿಂದೆ ಹೊಸಕೋಟೆ, ವೈಟ್ ಫೀಲ್ಡ್, ವರ್ತೂರು ಕೋಡಿ, ಮಾರತಳ್ಳಿ ಮುಖಾಂತರ ಬೆಂಗಳೂರಿನ ಕಲಾಸಿಪಾಳ್ಯದ ಕೃಷ್ಣರಾಜೇಂದ್ರ ಮಾರುಕಟ್ಟೆಗೆ ಖಾಸಗಿ ಮತ್ತು ಸರ್ಕಾರಿ ಬಸ್ ಸಂಚರಿಸುತ್ತಿದ್ದವು. ಈಗ ಸಂಚಾರ ಸ್ಥಗಿತಗೊಂಡಿರುವ ಕಾರಣ ಪ್ರಯಾಣಿಕರಿಗೆ ತೊಂದರೆಯಾಗಿದೆ. ಈ ಭಾಗಕ್ಕೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪಟ್ಟಣದಿಂದ ಚಿಕ್ಕಬಳ್ಳಾಪುರಕ್ಕೆ ಶಾಲೆ,ಕಾಲೇಜು ಆರಂಭ ಮತ್ತು ಬಿಡುವಿನ ವೇಳೆ ಬಿಎಂಟಿಸಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಪ್ರಯಾಣಿಕರ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>