<p><strong>ದೇವನಹಳ್ಳಿ:</strong> ಪಟ್ಟಣದ ಕೋಟೆ ಪಕ್ಕದಲ್ಲಿರುವ ಸಿಹಿ ನೀರಿನ ಕೆರೆಯಲ್ಲಿ ಪುರಸಭೆ ಆರಂಭಿಸಿರುವ ದೋಣಿ ವಿಹಾರಕ್ಕೆ ಬುಧವಾರ ದೋಣಿ ವಿಹಾರದಲ್ಲಿ ಸಾಗುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು.</p>.<p>ಕೆರೆ ಪ್ರದೇಶಗಳಲ್ಲಿ ಜಲ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಬೋಟಿಂಗ್ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಸುರಕ್ಷತೆ ದೃಷ್ಟಿಯಿಂದ ಪ್ರತಿಯೊಬ್ಬರು ದೋಣಿ ವಿಹಾರ ಮಾಡುವಾಗ ಲೈಫ್ ಜಾಕೆಟ್ ಹಾಕಿಕೊಳ್ಳುವುದು ಕಡ್ಡಾಯ ಎಂದು ತಿಳಿಸಿದರು.</p>.<p>ಜಲಕ್ರೀಡೆಗಳಲ್ಲಿ ಭಾಗವಹಿಸುವ ಮುನ್ನಾ ಮುಂಜಾಗ್ರತಾ ಕ್ರಮಗಳನ್ನು ಇದರ ಉಸ್ತುವಾರಿ ನೋಡಿಕೊಳ್ಳುವ ಸಿಬ್ಬಂದಿ ಪರಿಶೀಲಿಸಿಕೊಳ್ಳಬೇಕು. ಯಾವುದೇ ಅವಘಡ ಸಂಭವಿಸದಂತೆ ಎಚ್ಚರಿಕೆ ವಹಿಸಿ ಎಂದರು.</p>.<p>ದೋಣಿ ವಿಹಾರ ಪ್ರಾರಂಭದಿಂದಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆತಂದಾಗಿದೆ. ಕೆರೆಯೂ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇದ್ದು, ಅನೇಕ ಪ್ರವಾಸಿಗರು ದೇವನಹಳ್ಳಿ ಕೋಟೆ, ಶ್ರೀ ವೇಣುಗೋಪಾಲ ಸ್ವಾಮಿ ದೇಗುವ ವೀಕ್ಷಣೆಗೆ ಬರುತ್ತಾರೆ. ಬೋಟಿಂಗ್ನಿಂದಾಗಿ ಮಕ್ಕಳಿಗೆ ಜಲಕ್ರೀಡೆಯ ಬಗ್ಗೆ ಆಸಕ್ತಿ ಮೂಡುತ್ತದೆ ಎಂದು ತಿಳಿಸಿದರು.</p>.<p>ಬಯಪ ಅಧ್ಯಕ್ಷ ಶಾಂತಕುಮಾರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಉಪಾಧ್ಯಕ್ಷ ರವೀಂದ್ರ, ತಾಲ್ಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಜಗನ್ನಾಥ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ ಮಂಜುನಾಥ್, ತಹಶೀಲ್ದಾರ್ ಅನಿಲ್, ಪುರಸಭೆ ಮುಖ್ಯಾಧಿಕಾರಿ ಶಿವಮೂರ್ತಿ, ಪುರಸಭೆ ಸದ್ಯರಾದ ನಾಗೇಶ್, ರಘು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಪಟ್ಟಣದ ಕೋಟೆ ಪಕ್ಕದಲ್ಲಿರುವ ಸಿಹಿ ನೀರಿನ ಕೆರೆಯಲ್ಲಿ ಪುರಸಭೆ ಆರಂಭಿಸಿರುವ ದೋಣಿ ವಿಹಾರಕ್ಕೆ ಬುಧವಾರ ದೋಣಿ ವಿಹಾರದಲ್ಲಿ ಸಾಗುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು.</p>.<p>ಕೆರೆ ಪ್ರದೇಶಗಳಲ್ಲಿ ಜಲ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಬೋಟಿಂಗ್ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಸುರಕ್ಷತೆ ದೃಷ್ಟಿಯಿಂದ ಪ್ರತಿಯೊಬ್ಬರು ದೋಣಿ ವಿಹಾರ ಮಾಡುವಾಗ ಲೈಫ್ ಜಾಕೆಟ್ ಹಾಕಿಕೊಳ್ಳುವುದು ಕಡ್ಡಾಯ ಎಂದು ತಿಳಿಸಿದರು.</p>.<p>ಜಲಕ್ರೀಡೆಗಳಲ್ಲಿ ಭಾಗವಹಿಸುವ ಮುನ್ನಾ ಮುಂಜಾಗ್ರತಾ ಕ್ರಮಗಳನ್ನು ಇದರ ಉಸ್ತುವಾರಿ ನೋಡಿಕೊಳ್ಳುವ ಸಿಬ್ಬಂದಿ ಪರಿಶೀಲಿಸಿಕೊಳ್ಳಬೇಕು. ಯಾವುದೇ ಅವಘಡ ಸಂಭವಿಸದಂತೆ ಎಚ್ಚರಿಕೆ ವಹಿಸಿ ಎಂದರು.</p>.<p>ದೋಣಿ ವಿಹಾರ ಪ್ರಾರಂಭದಿಂದಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆತಂದಾಗಿದೆ. ಕೆರೆಯೂ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇದ್ದು, ಅನೇಕ ಪ್ರವಾಸಿಗರು ದೇವನಹಳ್ಳಿ ಕೋಟೆ, ಶ್ರೀ ವೇಣುಗೋಪಾಲ ಸ್ವಾಮಿ ದೇಗುವ ವೀಕ್ಷಣೆಗೆ ಬರುತ್ತಾರೆ. ಬೋಟಿಂಗ್ನಿಂದಾಗಿ ಮಕ್ಕಳಿಗೆ ಜಲಕ್ರೀಡೆಯ ಬಗ್ಗೆ ಆಸಕ್ತಿ ಮೂಡುತ್ತದೆ ಎಂದು ತಿಳಿಸಿದರು.</p>.<p>ಬಯಪ ಅಧ್ಯಕ್ಷ ಶಾಂತಕುಮಾರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಉಪಾಧ್ಯಕ್ಷ ರವೀಂದ್ರ, ತಾಲ್ಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಜಗನ್ನಾಥ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ ಮಂಜುನಾಥ್, ತಹಶೀಲ್ದಾರ್ ಅನಿಲ್, ಪುರಸಭೆ ಮುಖ್ಯಾಧಿಕಾರಿ ಶಿವಮೂರ್ತಿ, ಪುರಸಭೆ ಸದ್ಯರಾದ ನಾಗೇಶ್, ರಘು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>