<p><strong>ದೇವನಹಳ್ಳಿ</strong>: ಪಟ್ಟಣದ ಟಿಪ್ಪು ಸರ್ಕಲ್ ಸಮೀಪದ ಚರಂಡಿಯಲ್ಲಿ ಅಪರಿಚಿತ ಮಹಿಳೆಯ ಶವ ಬುಧವಾರ ಪತ್ತೆಯಾಗಿದೆ.</p>.<p>ಸ್ಥಳೀಯರು ದುರ್ವಾಸನೆ ಗಮನಿಸಿ ಪರಿಶೀಲಿಸಿದಾಗ ಚರಂಡಿಯಲ್ಲಿ ಶವ ಕಂಡುಬಂದಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆ ಸುಮಾರು ಒಂದು ವಾರದ ಹಿಂದೆ ಚರಂಡಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ.</p>.<p>ನಿರಂತರವಾಗಿ ನೀರು ಹರಿದ ಪರಿಣಾಮ ಶವ ಕೊಳೆತು ಹುಳುಗಳು ಕಾಣಿಸಿಕೊಂಡಿವೆ. ಮಹಿಳೆಯ ತಲೆಯ ಭಾಗದಲ್ಲಿ ದಾರ ಕಂಡುಬಂದಿರುವುದರಿಂದ ಪ್ರಕರಣದ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಇದು ಕೊಲೆಯೋ ಅಥವಾ ಅಪಘಾತವೋ ಎಂಬುದು ತನಿಖೆಯಿಂದಲೇ ಸ್ಪಷ್ಟವಾಗಬೇಕಿದೆ.</p>.<p>ಮಾಹಿತಿ ತಿಳಿದ ತಕ್ಷಣ ದೇವನಹಳ್ಳಿ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀಹರ್ಷ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಸೋಕೋ ತಂಡ ಭೇಟಿ ನೀಡಿ ಮಾದರಿ ಸಂಗ್ರಹಿಸಿದೆ.</p>.<p>ಘಟನಾ ಸ್ಥಳದಲ್ಲಿ ಶವ ನೋಡಲು ಸ್ಥಳೀಯರು ಮುಗಿಬಿದ್ದಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ಪಟ್ಟಣದ ಟಿಪ್ಪು ಸರ್ಕಲ್ ಸಮೀಪದ ಚರಂಡಿಯಲ್ಲಿ ಅಪರಿಚಿತ ಮಹಿಳೆಯ ಶವ ಬುಧವಾರ ಪತ್ತೆಯಾಗಿದೆ.</p>.<p>ಸ್ಥಳೀಯರು ದುರ್ವಾಸನೆ ಗಮನಿಸಿ ಪರಿಶೀಲಿಸಿದಾಗ ಚರಂಡಿಯಲ್ಲಿ ಶವ ಕಂಡುಬಂದಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆ ಸುಮಾರು ಒಂದು ವಾರದ ಹಿಂದೆ ಚರಂಡಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ.</p>.<p>ನಿರಂತರವಾಗಿ ನೀರು ಹರಿದ ಪರಿಣಾಮ ಶವ ಕೊಳೆತು ಹುಳುಗಳು ಕಾಣಿಸಿಕೊಂಡಿವೆ. ಮಹಿಳೆಯ ತಲೆಯ ಭಾಗದಲ್ಲಿ ದಾರ ಕಂಡುಬಂದಿರುವುದರಿಂದ ಪ್ರಕರಣದ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಇದು ಕೊಲೆಯೋ ಅಥವಾ ಅಪಘಾತವೋ ಎಂಬುದು ತನಿಖೆಯಿಂದಲೇ ಸ್ಪಷ್ಟವಾಗಬೇಕಿದೆ.</p>.<p>ಮಾಹಿತಿ ತಿಳಿದ ತಕ್ಷಣ ದೇವನಹಳ್ಳಿ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀಹರ್ಷ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಸೋಕೋ ತಂಡ ಭೇಟಿ ನೀಡಿ ಮಾದರಿ ಸಂಗ್ರಹಿಸಿದೆ.</p>.<p>ಘಟನಾ ಸ್ಥಳದಲ್ಲಿ ಶವ ನೋಡಲು ಸ್ಥಳೀಯರು ಮುಗಿಬಿದ್ದಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>