ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಾಫಿಕ್‌ಗೆ ಬೇಸತ್ತು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ: ವಿದ್ಯಾರ್ಥಿ ಬಂಧನ

Last Updated 22 ಡಿಸೆಂಬರ್ 2022, 14:35 IST
ಅಕ್ಷರ ಗಾತ್ರ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್‌ ಹಾಕುವುದಾಗಿ 12 ದಿನಗಳ ಹಿಂದೆ ಟ್ವೀಟ್‌ ಮಾಡಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿಯನ್ನು ವಿಮಾನ ನಿಲ್ದಾಣ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬೆಂಗಳೂರಿನ ಎಂಜಿನಿಯರಿಂಗ್‌ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಪಂಜಾಬ್‌ ಮೂಲದ ಗಣೇಶ್‌ ವೈಭವ್ (20) ಬಂಧಿತ ವಿದ್ಯಾರ್ಥಿ.

ಬೆಂಗಳೂರಿನಪರಪ್ಪನ ಅಗ್ರಹಾರ ಬಳಿಯ ಕೂಡ್ಲು ಗೇಟ್‌ ಬಳಿಪೋಷಕರೊಂದಿಗೆ ವಾಸವಿರುವ ಈತ, ಡಿ.10 ರಂದು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವಾಗ ಟ್ವೀಟ್‌ ಮಾಡಿದ್ದ.

ವಿಮಾನ ನಿಲ್ದಾಣಕ್ಕೆ ತಲುಪಲು ಸಾಕಷ್ಟು ಟ್ರಾಫಿಕ್‌ ಕಿರಿಕಿರಿ ಅನುಭವಿಸಿದ್ದ ಆರೋಪಿ ಬೇಸತ್ತು, ‘ವಿಮಾನ ನಿಲ್ದಾಣಕ್ಕೆ ಬಾಂಬ್‌ ಹಾಕುತ್ತೇನೆ, ಬೆಂಗಳೂರಿನ ಹತ್ತಿರ ಇನ್ನೊಂದು ನಿಲ್ದಾಣ ಸ್ಥಾಪಿಸಿ’ ಎಂದು ಟ್ವೀಟ್‌ ಮಾಡಿದ್ದ. ಆತನ ವಿರುದ್ಧ ವಿಮಾನ ನಿಲ್ದಾಣದ ವ್ಯವಸ್ಥಾಪಕ ಡಿ.12ರಂದು ವಿಮಾನ ನಿಲ್ದಾಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ನಗರದ ಅತಿಯಾದ ಟ್ರಾಫಿಕ್‌ನಿಂದ ಬೇಸತ್ತು ಈ ರೀತಿ ಟ್ವೀಟ್‌ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT