<p><strong>ಆನೇಕಲ್ : </strong>ತಾಲ್ಲೂಕಿನ ಬೊಮ್ಮಸಂದ್ರ ಪುರಸಭೆ ವ್ಯಾಪ್ತಿಯಲ್ಲಿ 4ನೇ ವಾರ್ಡ್ನಲ್ಲಿ ಹೈಮಾಸ್ಕ್ ದೀಪ, ಕೊಳವೆ ಬಾವಿ, ಯೋಗ ಮಂದಿರ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಬಿ.ಶಿವಣ್ಣ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿ, ಬೊಮ್ಮಸಂದ್ರ ಪುರಸಭೆಯು ಕೈಗಾರಿಕ ಪ್ರದೇಶವಾಗಿದೆ. ಸಾವಿರಾರು ಕಾರ್ಮಿಕರು ಈ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ವಹಿಸಲಾಗುವುದು. ನೀರಿನ ಸಮಸ್ಯೆ ಪರಿಹರಿಸಲು ಬೊಮ್ಮಸಂದ್ರ ಪುರಸಭೆ ವ್ಯಾಪ್ತಿಯಲ್ಲಿ ಮೂರು ಕೊಳವೆ ಬಾವಿಗಳನ್ನು ಕೊರೆಯಿಸಲಾಗಿದೆ. ಸಾರ್ವಜನಿಕರು ಸಂಜೆಯ ವೇಳೆಯಲ್ಲಿ ಸುಲಭ ಸಂಚಾರಕ್ಕ ಅನುವಾಗುವಂತೆ ಹೈಮಾಸ್ಕ್ ದೀಪವನ್ನು ಉದ್ಘಾಟಿಸಲಾಗಿದೆ ಎಂದರು.</p>.<p>ಯೋಗ, ಧ್ಯಾನದಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಆರೋಗ್ಯದ ಸಮಸ್ಯೆಗಳನ್ನು ಪರಿಹರಿಸಲು ಯೋಗ ಕೇಂದ್ರ ಅವಶ್ಯಕವಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಯೋಗ ಮಂದಿರವನ್ನು ಸ್ಥಾಪಿಸಲಾಗಿದ್ದು ಬೊಮ್ಮಸಂದ್ರ ಪುರಸಭೆ ವ್ಯಾಪ್ತಿಯ ಜನತೆ ಯೋಗ ಮಂದಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.</p>.<p>ಬೊಮ್ಮಸಂದ್ರ ಕೈಗಾರಿಕ ಪ್ರದೇಶದ ಅಧ್ಯಕ್ಷ ಎ.ಪ್ರಸಾದ್, ಬೊಮ್ಮಸಂದ್ರ ಪುರಸಭಾ ಅಧ್ಯಕ್ಷ ಗೋಪಾಲ್, ಸದಸ್ಯ ಚಲಪತಿ, ಮುಖಂಡರಾದ ಕಿರಣ್ ಕುಮಾರ್, ಮ್ಯಾಥ್ಯು, ಮಂಜುನಾಥ್, ಪುನೀತ್ ಪ್ರಸಾದ್, ದಿಲೀಪ್, ಅನಿಲ್, ಜಗದೀಶ್, ರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್ : </strong>ತಾಲ್ಲೂಕಿನ ಬೊಮ್ಮಸಂದ್ರ ಪುರಸಭೆ ವ್ಯಾಪ್ತಿಯಲ್ಲಿ 4ನೇ ವಾರ್ಡ್ನಲ್ಲಿ ಹೈಮಾಸ್ಕ್ ದೀಪ, ಕೊಳವೆ ಬಾವಿ, ಯೋಗ ಮಂದಿರ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಬಿ.ಶಿವಣ್ಣ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿ, ಬೊಮ್ಮಸಂದ್ರ ಪುರಸಭೆಯು ಕೈಗಾರಿಕ ಪ್ರದೇಶವಾಗಿದೆ. ಸಾವಿರಾರು ಕಾರ್ಮಿಕರು ಈ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ವಹಿಸಲಾಗುವುದು. ನೀರಿನ ಸಮಸ್ಯೆ ಪರಿಹರಿಸಲು ಬೊಮ್ಮಸಂದ್ರ ಪುರಸಭೆ ವ್ಯಾಪ್ತಿಯಲ್ಲಿ ಮೂರು ಕೊಳವೆ ಬಾವಿಗಳನ್ನು ಕೊರೆಯಿಸಲಾಗಿದೆ. ಸಾರ್ವಜನಿಕರು ಸಂಜೆಯ ವೇಳೆಯಲ್ಲಿ ಸುಲಭ ಸಂಚಾರಕ್ಕ ಅನುವಾಗುವಂತೆ ಹೈಮಾಸ್ಕ್ ದೀಪವನ್ನು ಉದ್ಘಾಟಿಸಲಾಗಿದೆ ಎಂದರು.</p>.<p>ಯೋಗ, ಧ್ಯಾನದಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಆರೋಗ್ಯದ ಸಮಸ್ಯೆಗಳನ್ನು ಪರಿಹರಿಸಲು ಯೋಗ ಕೇಂದ್ರ ಅವಶ್ಯಕವಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಯೋಗ ಮಂದಿರವನ್ನು ಸ್ಥಾಪಿಸಲಾಗಿದ್ದು ಬೊಮ್ಮಸಂದ್ರ ಪುರಸಭೆ ವ್ಯಾಪ್ತಿಯ ಜನತೆ ಯೋಗ ಮಂದಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.</p>.<p>ಬೊಮ್ಮಸಂದ್ರ ಕೈಗಾರಿಕ ಪ್ರದೇಶದ ಅಧ್ಯಕ್ಷ ಎ.ಪ್ರಸಾದ್, ಬೊಮ್ಮಸಂದ್ರ ಪುರಸಭಾ ಅಧ್ಯಕ್ಷ ಗೋಪಾಲ್, ಸದಸ್ಯ ಚಲಪತಿ, ಮುಖಂಡರಾದ ಕಿರಣ್ ಕುಮಾರ್, ಮ್ಯಾಥ್ಯು, ಮಂಜುನಾಥ್, ಪುನೀತ್ ಪ್ರಸಾದ್, ದಿಲೀಪ್, ಅನಿಲ್, ಜಗದೀಶ್, ರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>