<p><strong>ಕನಕಪುರ</strong>: ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಶಿಕ್ಷಣ ನೀತಿ ರೂಪಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ.ಪಿ.ವಿ. ನಿರಂಜನಾರಾಧ್ಯ ಒತ್ತಾಯಿಸಿದ್ದಾರೆ.</p>.<p>ಬೂದುಗುಪ್ಪೆ ಬಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಗಡಿಭಾಗದ ಕನ್ನಡ ಶಾಲೆಗಳ ಸ್ಥಿತಿಗತಿ ಹಾಗೂ ಪರಿಹಾರೋಪಾಯ ಸಮಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಮಾತೃಶ್ರೀ ಸಂಸ್ಥೆ, ನಮನ ಚಾರಿಟಬಲ್ ಟ್ರಸ್ಟ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಜಂಟಿಯಾಗಿ ಈ ಸಮಾಲೋಚನಾ ಸಭೆ ಆಯೋಜಿಸಿದ್ದವು.</p>.<p>ಗಡಿಭಾಗದ ಸರ್ಕಾರಿ ಶಾಲೆಗಳು ಅಭಿವೃದ್ಧಿ ಆಗಬೇಕಾದರೆ ಕಾಯಂ ಶಿಕ್ಷಕರನ್ನು ನೇಮಿಸಬೇಕು. ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಶಿಕ್ಷಣ ನೀತಿ ಜಾರಿಗೊಳಿಸಬೇಕು ಎಂದು ಅಭಿಪ್ರಾಯಪಟ್ಟರು.</p>.<p>ಗಡಿಭಾಗದ ಕನ್ನಡ ಶಾಲೆಗಳ ಸ್ಥಿತಿಗತಿ ಹಾಗೂ ಪರಿಹಾರೋಪಾಯ ವಿಷಯವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಟಿ.ವೆಂಕಟೇಶ್ ಮಂಡಿಸಿದರು.</p>.<p>ಗಡಿಭಾಗದ ಸರ್ಕಾರಿ ಶಾಲೆಗಳು ಬರೀ ಮಾತಿನಲ್ಲಿ ಹೇಳಿದರೆ ಉಳಿಯಲ್ಲ. ಶಾಲೆಗಳನ್ನು ದತ್ತು ಪಡೆದು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ಸಲಹೆ ನೀಡಿದರು.</p>.<p>‘ನಮ್ಮೂರ ಶಾಲೆಗೆ ನಮ್ಮೂರ ಯೋಜನೆ’ ಕಾರ್ಯಕ್ರಮದ ಅಡಿ ಗಡಿಭಾಗದ ಕನ್ನಡ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ಕಲಿಕಾ ಸಾಮಗ್ರಿ ಮತ್ತು ಕ್ರೀಡೋಪಕರಣಗಳ ವಿತರಣೆ ಮಾಡಲಾಗುತ್ತಿದೆ ಎಂದು ನಮನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನಮನ ಚಂದ್ರು ಹೇಳಿದರು.</p>.<p>ಬೂದಿಗುಪ್ಪೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಕೋಮಲ ಎ.ಸಿ ಅಧ್ಯಕ್ಷತೆ ವಹಿಸಿದ್ದರು. ಮಾತೃಶ್ರೀ ಸಂಸ್ಥೆ ಗೌರವಾಧ್ಯಕ್ಷ ಡಿ.ವೆಂಕಟರಮಣಸ್ವಾಮಿ, ಸಹ ಪ್ರಾಧ್ಯಾಪಕ ವಿಶ್ವರಾಧ್ಯ, ಡಾ.ಪ್ರತಿಮಾದೇವಿ ಚರ್ಚೆಯಲ್ಲಿ ಭಾಗವಹಿಸಿದ್ದರು.</p>.<p>ಗಡಿ ಭಾಗದ ಸರ್ಕಾರಿ ಶಾಲಾ ಶಿಕ್ಷಕರಾದ ಸತೀಶ್, ಮಹದೇವ ರಾವ್, ನಟರಾಜ್ ವೈ.ಸಿ, ಅವಿನಾಶ್, ಮರಸಪ್ಪ ರವಿ, ಕೂಗಿ ಗಿರಿಯಪ್ಪ, ಮಹಮ್ಮದ್ ಯಾಕೂದ್ ಪಾಷಾ, ಚಂದ್ರಾಜ್, ಲೋಕೇಶ್ ಚರ್ಚೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಶಿಕ್ಷಣ ನೀತಿ ರೂಪಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ.ಪಿ.ವಿ. ನಿರಂಜನಾರಾಧ್ಯ ಒತ್ತಾಯಿಸಿದ್ದಾರೆ.</p>.<p>ಬೂದುಗುಪ್ಪೆ ಬಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಗಡಿಭಾಗದ ಕನ್ನಡ ಶಾಲೆಗಳ ಸ್ಥಿತಿಗತಿ ಹಾಗೂ ಪರಿಹಾರೋಪಾಯ ಸಮಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಮಾತೃಶ್ರೀ ಸಂಸ್ಥೆ, ನಮನ ಚಾರಿಟಬಲ್ ಟ್ರಸ್ಟ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಜಂಟಿಯಾಗಿ ಈ ಸಮಾಲೋಚನಾ ಸಭೆ ಆಯೋಜಿಸಿದ್ದವು.</p>.<p>ಗಡಿಭಾಗದ ಸರ್ಕಾರಿ ಶಾಲೆಗಳು ಅಭಿವೃದ್ಧಿ ಆಗಬೇಕಾದರೆ ಕಾಯಂ ಶಿಕ್ಷಕರನ್ನು ನೇಮಿಸಬೇಕು. ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಶಿಕ್ಷಣ ನೀತಿ ಜಾರಿಗೊಳಿಸಬೇಕು ಎಂದು ಅಭಿಪ್ರಾಯಪಟ್ಟರು.</p>.<p>ಗಡಿಭಾಗದ ಕನ್ನಡ ಶಾಲೆಗಳ ಸ್ಥಿತಿಗತಿ ಹಾಗೂ ಪರಿಹಾರೋಪಾಯ ವಿಷಯವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಟಿ.ವೆಂಕಟೇಶ್ ಮಂಡಿಸಿದರು.</p>.<p>ಗಡಿಭಾಗದ ಸರ್ಕಾರಿ ಶಾಲೆಗಳು ಬರೀ ಮಾತಿನಲ್ಲಿ ಹೇಳಿದರೆ ಉಳಿಯಲ್ಲ. ಶಾಲೆಗಳನ್ನು ದತ್ತು ಪಡೆದು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ಸಲಹೆ ನೀಡಿದರು.</p>.<p>‘ನಮ್ಮೂರ ಶಾಲೆಗೆ ನಮ್ಮೂರ ಯೋಜನೆ’ ಕಾರ್ಯಕ್ರಮದ ಅಡಿ ಗಡಿಭಾಗದ ಕನ್ನಡ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ಕಲಿಕಾ ಸಾಮಗ್ರಿ ಮತ್ತು ಕ್ರೀಡೋಪಕರಣಗಳ ವಿತರಣೆ ಮಾಡಲಾಗುತ್ತಿದೆ ಎಂದು ನಮನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನಮನ ಚಂದ್ರು ಹೇಳಿದರು.</p>.<p>ಬೂದಿಗುಪ್ಪೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಕೋಮಲ ಎ.ಸಿ ಅಧ್ಯಕ್ಷತೆ ವಹಿಸಿದ್ದರು. ಮಾತೃಶ್ರೀ ಸಂಸ್ಥೆ ಗೌರವಾಧ್ಯಕ್ಷ ಡಿ.ವೆಂಕಟರಮಣಸ್ವಾಮಿ, ಸಹ ಪ್ರಾಧ್ಯಾಪಕ ವಿಶ್ವರಾಧ್ಯ, ಡಾ.ಪ್ರತಿಮಾದೇವಿ ಚರ್ಚೆಯಲ್ಲಿ ಭಾಗವಹಿಸಿದ್ದರು.</p>.<p>ಗಡಿ ಭಾಗದ ಸರ್ಕಾರಿ ಶಾಲಾ ಶಿಕ್ಷಕರಾದ ಸತೀಶ್, ಮಹದೇವ ರಾವ್, ನಟರಾಜ್ ವೈ.ಸಿ, ಅವಿನಾಶ್, ಮರಸಪ್ಪ ರವಿ, ಕೂಗಿ ಗಿರಿಯಪ್ಪ, ಮಹಮ್ಮದ್ ಯಾಕೂದ್ ಪಾಷಾ, ಚಂದ್ರಾಜ್, ಲೋಕೇಶ್ ಚರ್ಚೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>