ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಾಹ್ಮಣ ಜಾಗೃತ ವೇದಿಕೆ ಸಭೆ

Last Updated 29 ಸೆಪ್ಟೆಂಬರ್ 2022, 5:46 IST
ಅಕ್ಷರ ಗಾತ್ರ

ಹೊಸಕೋಟೆ: ‘ಬ್ರಾಹ್ಮಣರಿಗೆ ಮೊದಲಿನಿಂದಲೂ ರಾಜಾಶ್ರಯವಿತ್ತಾದರೂ ರಾಜರನ್ನು ಆಯ್ಕೆ ಮಾಡಿ ಅವರನ್ನು ಪಟ್ಟದಲ್ಲಿ ಕೂರಿಸುವ ಕೆಲಸವನ್ನು ಬ್ರಾಹ್ಮಣರೇ ಮಾಡುತ್ತಿದ್ದರು’ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ನಗರದಲ್ಲಿ ಬ್ರಾಹ್ಮಣ ಜಾಗೃತ ವೇದಿಕೆಯಿಂದ ನಿರ್ಮಾಣವಾಗುತ್ತಿರುವ ನೂತನ ಕಟ್ಟಡ ವೀಕ್ಷಿಸಿದ ಬಳಿಕ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಬ್ರಾಹ್ಮಣ ಜನಾಂಗದ ಜನಸಂಖ್ಯೆ ಬಹಳ ಕಡಿಮೆಯಿದೆ. ಅವರು ಅಲ್ಪಸಂಖ್ಯಾತರಾದರೂ ಕಾಲಾನುಕಾಲದಿಂದ ಸ್ಥಿತಿವಂತರಾಗಿದ್ದಾರೆ ಎಂದರು.

ತಾವು ಮತ್ತೆ ಅಧಿಕಾರಕ್ಕೆ ಬರಲು ಬ್ರಾಹ್ಮಣ ಸಮಾಜದ ಬೆಂಬಲ ಮತ್ತು ಆಶೀರ್ವಾದದ ಅಗತ್ಯವಿದೆ ಎಂದರು.

ಸಂಘದ ಅಧ್ಯಕ್ಷ ನರಸಿಂಹ ಹೆಬ್ಬಾರ್‌, ‘ಶಾಸಕರಿಗೆ ಸಂಘದ ಬಗ್ಗೆ ಹೆಚ್ಚು ಅಭಿಮಾನವಿದೆ. ಸಂಘ ಮತ್ತು ಸಮಾಜಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಅವರ ತಂದೆಯ ಕಾಲದಿಂದಲೂ ಬ್ರಾಹ್ಮಣ ಸಮಾಜದ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ’ ಎಂದು ತಿಳಿಸಿದರು.

ಸಭೆಯಲ್ಲಿ ಸಂಘದ ಗೌರವಾಧ್ಯಕ್ಷ ಬಿ.ಪಿ. ಶ್ರೀನಿವಾಸಯ್ಯ, ಉಪಾಧ್ಯಕ್ಷ ಉದಯ್ ಅಯ್ಯರ್‌, ಖಜಾಂಚಿ ಫಣಿರಾಜ್, ಗ್ರಾಮ ಪಂಚಾಯಿತಿ ಸದಸ್ಯ ಗುಟ್ಟಹಳ್ಳಿ ಮಂಜುನಾಥ್, ಅಕ್ಷಯ ವಿಪ್ರ ಮಹಾಸಭಾದ ಅಧ್ಯಕ್ಷ ರಾಜಣ್ಣ, ನಗರಸಭೆ ಸದಸ್ಯ ಗೌತಮ್, ಮುಖಂಡ ನಾರಾಯಣಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT