<p><strong>ಹೊಸಕೋಟೆ</strong>: ‘ಬ್ರಾಹ್ಮಣರಿಗೆ ಮೊದಲಿನಿಂದಲೂ ರಾಜಾಶ್ರಯವಿತ್ತಾದರೂ ರಾಜರನ್ನು ಆಯ್ಕೆ ಮಾಡಿ ಅವರನ್ನು ಪಟ್ಟದಲ್ಲಿ ಕೂರಿಸುವ ಕೆಲಸವನ್ನು ಬ್ರಾಹ್ಮಣರೇ ಮಾಡುತ್ತಿದ್ದರು’ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.</p>.<p>ನಗರದಲ್ಲಿ ಬ್ರಾಹ್ಮಣ ಜಾಗೃತ ವೇದಿಕೆಯಿಂದ ನಿರ್ಮಾಣವಾಗುತ್ತಿರುವ ನೂತನ ಕಟ್ಟಡ ವೀಕ್ಷಿಸಿದ ಬಳಿಕ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ರಾಜ್ಯದಲ್ಲಿ ಬ್ರಾಹ್ಮಣ ಜನಾಂಗದ ಜನಸಂಖ್ಯೆ ಬಹಳ ಕಡಿಮೆಯಿದೆ. ಅವರು ಅಲ್ಪಸಂಖ್ಯಾತರಾದರೂ ಕಾಲಾನುಕಾಲದಿಂದ ಸ್ಥಿತಿವಂತರಾಗಿದ್ದಾರೆ ಎಂದರು.</p>.<p>ತಾವು ಮತ್ತೆ ಅಧಿಕಾರಕ್ಕೆ ಬರಲು ಬ್ರಾಹ್ಮಣ ಸಮಾಜದ ಬೆಂಬಲ ಮತ್ತು ಆಶೀರ್ವಾದದ ಅಗತ್ಯವಿದೆ ಎಂದರು.</p>.<p>ಸಂಘದ ಅಧ್ಯಕ್ಷ ನರಸಿಂಹ ಹೆಬ್ಬಾರ್, ‘ಶಾಸಕರಿಗೆ ಸಂಘದ ಬಗ್ಗೆ ಹೆಚ್ಚು ಅಭಿಮಾನವಿದೆ. ಸಂಘ ಮತ್ತು ಸಮಾಜಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಅವರ ತಂದೆಯ ಕಾಲದಿಂದಲೂ ಬ್ರಾಹ್ಮಣ ಸಮಾಜದ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ’ ಎಂದು ತಿಳಿಸಿದರು.</p>.<p>ಸಭೆಯಲ್ಲಿ ಸಂಘದ ಗೌರವಾಧ್ಯಕ್ಷ ಬಿ.ಪಿ. ಶ್ರೀನಿವಾಸಯ್ಯ, ಉಪಾಧ್ಯಕ್ಷ ಉದಯ್ ಅಯ್ಯರ್, ಖಜಾಂಚಿ ಫಣಿರಾಜ್, ಗ್ರಾಮ ಪಂಚಾಯಿತಿ ಸದಸ್ಯ ಗುಟ್ಟಹಳ್ಳಿ ಮಂಜುನಾಥ್, ಅಕ್ಷಯ ವಿಪ್ರ ಮಹಾಸಭಾದ ಅಧ್ಯಕ್ಷ ರಾಜಣ್ಣ, ನಗರಸಭೆ ಸದಸ್ಯ ಗೌತಮ್, ಮುಖಂಡ ನಾರಾಯಣಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ‘ಬ್ರಾಹ್ಮಣರಿಗೆ ಮೊದಲಿನಿಂದಲೂ ರಾಜಾಶ್ರಯವಿತ್ತಾದರೂ ರಾಜರನ್ನು ಆಯ್ಕೆ ಮಾಡಿ ಅವರನ್ನು ಪಟ್ಟದಲ್ಲಿ ಕೂರಿಸುವ ಕೆಲಸವನ್ನು ಬ್ರಾಹ್ಮಣರೇ ಮಾಡುತ್ತಿದ್ದರು’ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.</p>.<p>ನಗರದಲ್ಲಿ ಬ್ರಾಹ್ಮಣ ಜಾಗೃತ ವೇದಿಕೆಯಿಂದ ನಿರ್ಮಾಣವಾಗುತ್ತಿರುವ ನೂತನ ಕಟ್ಟಡ ವೀಕ್ಷಿಸಿದ ಬಳಿಕ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ರಾಜ್ಯದಲ್ಲಿ ಬ್ರಾಹ್ಮಣ ಜನಾಂಗದ ಜನಸಂಖ್ಯೆ ಬಹಳ ಕಡಿಮೆಯಿದೆ. ಅವರು ಅಲ್ಪಸಂಖ್ಯಾತರಾದರೂ ಕಾಲಾನುಕಾಲದಿಂದ ಸ್ಥಿತಿವಂತರಾಗಿದ್ದಾರೆ ಎಂದರು.</p>.<p>ತಾವು ಮತ್ತೆ ಅಧಿಕಾರಕ್ಕೆ ಬರಲು ಬ್ರಾಹ್ಮಣ ಸಮಾಜದ ಬೆಂಬಲ ಮತ್ತು ಆಶೀರ್ವಾದದ ಅಗತ್ಯವಿದೆ ಎಂದರು.</p>.<p>ಸಂಘದ ಅಧ್ಯಕ್ಷ ನರಸಿಂಹ ಹೆಬ್ಬಾರ್, ‘ಶಾಸಕರಿಗೆ ಸಂಘದ ಬಗ್ಗೆ ಹೆಚ್ಚು ಅಭಿಮಾನವಿದೆ. ಸಂಘ ಮತ್ತು ಸಮಾಜಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಅವರ ತಂದೆಯ ಕಾಲದಿಂದಲೂ ಬ್ರಾಹ್ಮಣ ಸಮಾಜದ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ’ ಎಂದು ತಿಳಿಸಿದರು.</p>.<p>ಸಭೆಯಲ್ಲಿ ಸಂಘದ ಗೌರವಾಧ್ಯಕ್ಷ ಬಿ.ಪಿ. ಶ್ರೀನಿವಾಸಯ್ಯ, ಉಪಾಧ್ಯಕ್ಷ ಉದಯ್ ಅಯ್ಯರ್, ಖಜಾಂಚಿ ಫಣಿರಾಜ್, ಗ್ರಾಮ ಪಂಚಾಯಿತಿ ಸದಸ್ಯ ಗುಟ್ಟಹಳ್ಳಿ ಮಂಜುನಾಥ್, ಅಕ್ಷಯ ವಿಪ್ರ ಮಹಾಸಭಾದ ಅಧ್ಯಕ್ಷ ರಾಜಣ್ಣ, ನಗರಸಭೆ ಸದಸ್ಯ ಗೌತಮ್, ಮುಖಂಡ ನಾರಾಯಣಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>