<p><strong>ಕುಣಿಗಲ್:</strong> ತಾಲ್ಲೂಕಿನ ಹೇರೂರು ಗ್ರಾಮದ ಬಳಿ ಸೋಮವಾರ ಬಿಜಿಎಸ್ ಶಾಲಾ ಬಸ್ನಿಂದ ಬಿದ್ದ ವಿದ್ಯಾರ್ಥಿ ಮೇಲೆ ಹಿಂಬದಿ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಕಟ್ಟಿಗೆಹಳ್ಳಿ ರಾಮಕೃಷ್ಣ ಅವರ ಪುತ್ರ ಮೋಹಿತ್ (9) ಮೃತ ವಿದ್ಯಾರ್ಥಿ. ಶಾಲೆ ಮುಗಿದ ನಂತರ ಶಾಲಾ ವಾಹನದಲ್ಲಿ ಗ್ರಾಮಕ್ಕೆ ಹಿಂತಿರುಗುವ ವೇಳೆ ಬಾಗಿಲು ಕಳಚಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ತಲೆ ಮೇಲೆ ಹಿಂಬದಿ ಚಕ್ರ ಹರಿದಿದೆ. ಬಸ್ ಚಾಲಕ ಸದಾನಂದ ಪರಾರಿಯಾಗಿದ್ದಾನೆ.</p>.<p>ಶಾಲಾ ಆಡಳಿತ ಮಂಡಳಿ ಮತ್ತು ಚಾಲಕನ ನಿರ್ಲಕ್ಷ್ಯ ಖಂಡಿಸಿ ಪೋಷಕರು, ಸಂಬಂಧಿಕರು ಮತ್ತು ಗ್ರಾಮಸ್ಥರು ಶಾಲೆ ಮುಂಭಾಗದ ಹಳೆ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದ ಮಂಗಳಾನಂದನಾಥ ಸ್ವಾಮೀಜಿ, ಇಂತಹ ಘಟನೆ ಮರುಕಳಿಸದಂತೆ ಕ್ರಮಕೈಗೊಳ್ಳುವ ಭರವಸೆ ನೀಡುವಂತೆ ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ತಾಲ್ಲೂಕಿನ ಹೇರೂರು ಗ್ರಾಮದ ಬಳಿ ಸೋಮವಾರ ಬಿಜಿಎಸ್ ಶಾಲಾ ಬಸ್ನಿಂದ ಬಿದ್ದ ವಿದ್ಯಾರ್ಥಿ ಮೇಲೆ ಹಿಂಬದಿ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಕಟ್ಟಿಗೆಹಳ್ಳಿ ರಾಮಕೃಷ್ಣ ಅವರ ಪುತ್ರ ಮೋಹಿತ್ (9) ಮೃತ ವಿದ್ಯಾರ್ಥಿ. ಶಾಲೆ ಮುಗಿದ ನಂತರ ಶಾಲಾ ವಾಹನದಲ್ಲಿ ಗ್ರಾಮಕ್ಕೆ ಹಿಂತಿರುಗುವ ವೇಳೆ ಬಾಗಿಲು ಕಳಚಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ತಲೆ ಮೇಲೆ ಹಿಂಬದಿ ಚಕ್ರ ಹರಿದಿದೆ. ಬಸ್ ಚಾಲಕ ಸದಾನಂದ ಪರಾರಿಯಾಗಿದ್ದಾನೆ.</p>.<p>ಶಾಲಾ ಆಡಳಿತ ಮಂಡಳಿ ಮತ್ತು ಚಾಲಕನ ನಿರ್ಲಕ್ಷ್ಯ ಖಂಡಿಸಿ ಪೋಷಕರು, ಸಂಬಂಧಿಕರು ಮತ್ತು ಗ್ರಾಮಸ್ಥರು ಶಾಲೆ ಮುಂಭಾಗದ ಹಳೆ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದ ಮಂಗಳಾನಂದನಾಥ ಸ್ವಾಮೀಜಿ, ಇಂತಹ ಘಟನೆ ಮರುಕಳಿಸದಂತೆ ಕ್ರಮಕೈಗೊಳ್ಳುವ ಭರವಸೆ ನೀಡುವಂತೆ ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>