‘ಸಾರಿಗೆ ಇಲಾಖೆಯು ವಾರ್ಷಿಕ ಸುಮಾರು ₹ 600 ಕೋಟಿ ನಷ್ಟ ಅನುಭವಿಸುತ್ತಿದ್ದರೂ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ನಮ್ಮ ಸರ್ಕಾರ ಎಲ್ಲ ಕಡೆಗಳಲ್ಲಿ ಸುಸುಜ್ಜಿತವಾದ ಬಸ್ ನಿಲ್ದಾಣಗಳನ್ನು ನಿರ್ಮಿಸುತ್ತಿದೆ. ಇದರಿಂದ ನಿತ್ಯ ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣ ಮಾಡುವ ಸಾರ್ವಜನಿಕರಿಗೆ ಬಹಳ ಅನುಕೂಲವಾಗುತ್ತದೆ’ ಎಂದರು. ಈಗಿನ ಬಸ್ ನಿಲ್ದಾಣಗಳಲ್ಲಿ ವಾಹನ ನಿಲುಗಡೆಯ ಜೊತೆಗೆ ವ್ಯವಸ್ಥಿತ ಶೌಚಾಲಯ, ಉಪಹಾರ ಗೃಹ, ವಿಶ್ರಾಂತಿ ಗೃಹ ನಿರ್ಮಿಸಿ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಸಲ್ಲಿಸುತ್ತಿದ್ದೇವೆ ಎಂದು ಅವರು ಹೇಳಿದರು.