ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್‌ ಭದ್ರತೆಯಲ್ಲಿ ಬಸ್‌ ಸಂಚಾರ ಆರಂಭ

Last Updated 16 ಏಪ್ರಿಲ್ 2021, 5:41 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಗರದಿಂದ ಬೆಂಗಳೂರು ಹಾಗೂ ವಿವಿಧ ಸ್ಥಳಗಳಿಗೆ ಪೊಲೀಸ್‌ ಭದ್ರತೆಯೊಂದಿಗೆ ಬಸ್‌ಗಳು ಸಂಚಾರ ಆರಂಭಿಸಿವೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರು ನಡೆಸುತ್ತಿರುವ ಮುಷ್ಕರದಿಂದ ದೊಡ್ಡಬಳ್ಳಾಪುರ ಡಿಪೋದಿಂದ ನಿರ್ವಹಣೆ ಮಾಡಲಾಗುತ್ತಿದ್ದ 92 ಮಾರ್ಗಗಳ ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು.

ಗುರುವಾರ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರು-ದೊಡ್ಡಬಳ್ಳಾಪುರ ನಡುವೆ ಸಾರಿಗೆ ಸಂಚಾರ ಆರಂಭಿಸಲಾಗಿದೆ. ಉಳಿದಂತೆ ದಾಬಸ್‌ಪೇಟೆ ಕಡೆಗೆ ನಾಲ್ಕು ಹಾಗೂ ದೇವನಹಳ್ಳಿ ಮಾರ್ಗದಲ್ಲಿ ನಾಲ್ಕು, ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರಕ್ಕೆ ತಲಾ ಒಂದು ಸಾರಿಗೆ ಬಸ್ ಸಂಚಾರ ಆರಂಭಿಸಿವೆ ಎಂದು ಕೆಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕ ಆನಂದ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT