ದೊಡ್ಡಬಳ್ಳಾಪುರ:ತಾಲ್ಲೂಕಿನ ಕೆಲವು ಗ್ರಾಮಗಳ ವ್ಯಾಪ್ತಿಯ ರಾಸುಗಳಲ್ಲಿ ಚರ್ಮಗಂಟು ರೋಗ ಉಲ್ಬಣವಾಗುತ್ತಿದೆ. ಸರ್ಕಾರದಿಂದ ಉಚಿತ ಲಸಿಕೆ ನೀಡುವುದು ವಿಳಂಬವಾಗುತ್ತಿದೆ. ಹೀಗಾಗಿ, ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿನ ಧರ್ಮ ನಿಧಿ, ಕಲ್ಯಾಣ ನಿಧಿಯಲ್ಲಿನ ಹಣ ತೆಗೆಯುವ ಮೂಲಕ ರಾಸುಗಳಿಗೆ ಮುಂಜಾಗ್ರತೆಯಾಗಿ ಲಸಿಕೆ ಹಾಕಿಸಬೇಕು ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ. ಆನಂದ್ಕುಮಾರ್ ತಿಳಿಸಿದ್ದಾರೆ.