<p><strong>ಸೂಲಿಬೆಲೆ: </strong>‘ವಿಧಾನಸಭೆ ಚುನಾವಣೆಯಲ್ಲಿ ಕೆಲಮತಗಳಿಂದ ಸೋಲಾಗಿತ್ತು. ಚುನಾವಣೆಯಲ್ಲಿ ಸ್ಪರ್ಧಿಸಲುಇನ್ನೂ ಮೂರುವರೆ ವರ್ಷಗಳ ಕಾಲ ಕಾಯಬೇಕಿತ್ತು. ಅದೃಷ್ಟವಶಾತ್ ಉಪಚುನಾವಣೆಯಲ್ಲಿನ ಗೆಲುವು ಹೊಸಕೋಟೆ ತಾಲ್ಲೂಕಿನ ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಅದಕ್ಕಾಗಿ ದುಡಿಯುತ್ತೇನೆ’ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ಸೂಲಿಬೆಲೆ ಹೋಬಳಿಯ ಎಂ.ಸತ್ಯವಾರ ಗ್ರಾಮದಲ್ಲಿ ಅಭಯ ಆಂಜನೇಯಸ್ವಾಮಿ ದೇವಾಲಯದಲ್ಲಿ ನಡೆದ ಮಂಡಲ ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ತಾಲ್ಲೂಕಿನ ಎಲ್ಲರ ಸೇವಕನಾಗಿದ್ದು, ಯಾವುದೇ ಜಾತಿ, ಧರ್ಮ, ಮತ ಭೇದವಿಲ್ಲದೆ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ’ ಎಂದರು.</p>.<p>‘ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ, ಉಪಚುನಾವಣೆ ಎದುರಾಯಿತು. ಕಳೆದ ಒಂದು ವರ್ಷ ಚುನಾವಣೆಯಲ್ಲೇ ಕಳೆದು ಹೋಯಿತು. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಅಭಿವೃದ್ಧಿಗೆ ಸಮಯ ಮೀಸಲಿಡುವ ಜತೆಗೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಸಮೀಪಿಸುತ್ತಿದ್ದು ಕಾರ್ಯಕರ್ತರು ಸಿದ್ಧರಾಗಬೇಕು’ ಎಂದು ಮನವಿ ಮಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ನಾಗರಾಜ್, ಮುಖಂಡರಾದ ಗೋಪಾಲಪ್ಪ, ಶ್ರೀನಿವಾಸ ಮೂರ್ತಿ ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ: </strong>‘ವಿಧಾನಸಭೆ ಚುನಾವಣೆಯಲ್ಲಿ ಕೆಲಮತಗಳಿಂದ ಸೋಲಾಗಿತ್ತು. ಚುನಾವಣೆಯಲ್ಲಿ ಸ್ಪರ್ಧಿಸಲುಇನ್ನೂ ಮೂರುವರೆ ವರ್ಷಗಳ ಕಾಲ ಕಾಯಬೇಕಿತ್ತು. ಅದೃಷ್ಟವಶಾತ್ ಉಪಚುನಾವಣೆಯಲ್ಲಿನ ಗೆಲುವು ಹೊಸಕೋಟೆ ತಾಲ್ಲೂಕಿನ ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಅದಕ್ಕಾಗಿ ದುಡಿಯುತ್ತೇನೆ’ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ಸೂಲಿಬೆಲೆ ಹೋಬಳಿಯ ಎಂ.ಸತ್ಯವಾರ ಗ್ರಾಮದಲ್ಲಿ ಅಭಯ ಆಂಜನೇಯಸ್ವಾಮಿ ದೇವಾಲಯದಲ್ಲಿ ನಡೆದ ಮಂಡಲ ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ತಾಲ್ಲೂಕಿನ ಎಲ್ಲರ ಸೇವಕನಾಗಿದ್ದು, ಯಾವುದೇ ಜಾತಿ, ಧರ್ಮ, ಮತ ಭೇದವಿಲ್ಲದೆ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ’ ಎಂದರು.</p>.<p>‘ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ, ಉಪಚುನಾವಣೆ ಎದುರಾಯಿತು. ಕಳೆದ ಒಂದು ವರ್ಷ ಚುನಾವಣೆಯಲ್ಲೇ ಕಳೆದು ಹೋಯಿತು. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಅಭಿವೃದ್ಧಿಗೆ ಸಮಯ ಮೀಸಲಿಡುವ ಜತೆಗೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಸಮೀಪಿಸುತ್ತಿದ್ದು ಕಾರ್ಯಕರ್ತರು ಸಿದ್ಧರಾಗಬೇಕು’ ಎಂದು ಮನವಿ ಮಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ನಾಗರಾಜ್, ಮುಖಂಡರಾದ ಗೋಪಾಲಪ್ಪ, ಶ್ರೀನಿವಾಸ ಮೂರ್ತಿ ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>