ಆದಿವಾಸಿ, ಅಲೆಮಾರಿ, ದಲಿತ ಹಾಗೂ ಹಿಂದುಳಿದ ಸಮುದಾಯಗಳ ವಿರುದ್ಧ ರಾಷ್ಟ್ರೀಯ ಪೌರತ್ವ ಕಾಯ್ದೆ, ಪೌರತ್ವ ನೋಂದಣಿ ಪ್ರಕ್ರಿಯೆಯ ಮೂಲಕ ದೇಶದ ಮೂಲ ನಿವಾಸಿಗರನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸುವ ಸಂಚನ್ನು ಆರ್.ಎಸ್.ಎಸ್, ಸಂಘ ಪರಿವಾರ ಮತ್ತು ಬಿಜೆಪಿ ಮಾಡುತ್ತಿವೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ರತಿಮ ಪಾತ್ರ ವಹಿಸಿದ ಮುಸ್ಲಿಮರು ದೇಶ ವಿಭಜನೆ ಸಂದರ್ಭದಲ್ಲಿ ತಾವೇ ಆಯ್ಕೆ ಮಾಡಿಕೊಂಡು ಭಾರತದಲ್ಲಿ ಉಳಿದರೇ ಹೊರತು ಜಿನ್ನಾ ಹಾಗೂ ಸಾವರ್ಕರ್ ಪ್ರತಿಪಾದಿಸಿದ ಎರಡು ರಾಷ್ಟ್ರಗಳ ಸಿದ್ಧಾಂತಗಳಿಂದಲ್ಲ ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು ಎಂದರು.