ಬಿಡದಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಮಂಜುನಾಥ್ ಗುರುವಾರ ಚಾಲನೆ ನೀಡಿದರು. ನಂತರ ಮಾತನಾಡಿದರು ಅವರು, ಬೈರಮಂಗಲ ಜಲಾಶಯ ಸುತ್ತಲಿನ ಗ್ರಾಮಗಳಲ್ಲಿ ಅಂತರ್ಜಲ ಕಲುಷಿತಗೊಂಡಿದೆ. ಈ ಭಾಗಗಳಲ್ಲಿ ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಹಂತ –ಹಂತವಾಗಿ ಕೈಗೊಳ್ಳಲಾಗುವುದು ಎಂದರು.
ಬೈರಮಂಗಲ ಜಲಾಶಯ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಎಡದಂಡೆ ನಾಲೆ ಮತ್ತು 9ಕಿ.ಮೀ ಬಲದಂಡೆ ನಾಲೆ ಅಭಿವೃದ್ಧಿಪಡಿಸಲು ಹಿಂದಿನ ಸರ್ಕಾರದಲ್ಲಿ ಬಿಡುಗಡೆಯಾಗಿದ್ದ ₹106 ಕೋಟಿ ಬಿಡುಗಡೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಹೇಳಿದರು.