ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊಡಿಗೇಹಳ್ಳಿ ಸಮೀಪದ ಆತ್ರೇಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರವು ನೂರು ಹಾಸಿಗೆ ಇರುವ ಆಸ್ಪತ್ರೆಯೆಂದು ಸುಳ್ಳು ಪುರಾವೆ ನೀಡಿದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದ ಸಂದರ್ಭದಲ್ಲಿ ಒಂದು ಹಾಸಿಗೆಯ ವ್ಯವಸ್ಥೆಯು ಕಾಣದ ಹಿನ್ನೆಲೆ, ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ ಪ್ರಕರಣ ದಾಖಲಿಸಲು ಆದೇಶಿಸಿದ್ದಾರೆ.