ದನಗಳ ಜಾತ್ರೆಗೆ ಬರುವ ರೈತರಿಗೆ ಹಾಗೂ ಜಾನುವಾರುಗಳಿಗೆ ಅಗತ್ಯ ಇರುವ ಮೂಲ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪ, ಪಶು ವೈದ್ಯಕೀಯ ಇಲಾಖೆಯ ವೈದ್ಯರು ಜಾತ್ರೆಯಲ್ಲಿ ಇರಲಿದ್ದಾರೆ. ರಾಸುಗಳಿಗೆ ಯಾವುದೇ ಸಾಂಕ್ರಾಮಿಕ ರೋಗ ಹರಡದಂತೆ ಸೂಕ್ತ ತಪಾಸಣೆ ಕೈಗೊಳ್ಳಲಾಗುತ್ತಿದೆ. ರೈತರು ಜಾತ್ರೆಯಲ್ಲಿ ರಾಸುಗಳ ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದರು.