<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕಿನ ಕುಂಟನಹಳ್ಳಿ, ಬೋಕೀಪುರ ಗ್ರಾಮಗಳಲ್ಲಿ ಭಾನುವಾರ ಬೆಳಗಿನ ಜಾವ 3 ಗಂಟೆಗೆ ಕಳ್ಳರು 23 ಕುರಿ,ಮೇಕೆ ಹೊತ್ತು ಒಯ್ದಿದ್ದಾರೆ.</p><p>ಸರಕು ಸಾಗಾಣಿಕೆ ವಾಹನದಲ್ಲಿ ಬಂದಿರುವ ಕಳ್ಳರು ಕುಂಟನಹಳ್ಳಿ ಗ್ರಾಮದ ಮಧ್ಯಭಾಗದಲ್ಲಿರುವ ಆನಂದಮ್ಮ ಚನ್ನಕೇಶವ ಅವರ ಕೊಟ್ಟಿಗೆಯಲ್ಲಿದ್ದ 15 ಕುರಿಗಳನ್ನು ವಾಹನದಲ್ಲಿ ತುಂಬಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p><p> ವಾಹನದ ನಂಬರ್ ಪ್ಲೇಟ್ ಕಾಣದಂತೆ ಬಟ್ಟೆ ಸುತ್ತಲಾಗಿದೆ.</p><p> ಬೋಕಿಪುರ ಗ್ರಾಮದ ನಾಗರಾಜ್, ಭರತ್ ಅವರ ಕುರಿ,ಮೇಕೆಗಳನ್ನು ಕಳವು ಮಾಡಲಾಗಿದೆ. </p><p>2023ರಲ್ಲೂ ಕುರಿ,ಮೇಕೆ, ದನಗಳ ಕಳವು ಮಿತಿ ಮೀರಿತ್ತು. ಕಳ್ಳರ ಹಾವಳಿಗೆ ಬೇಸತ್ತ ರೈತರು ಕುರಿ,ಮೇಕೆಗಳೊಂದಿಗೆ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆಯನ್ನೂ ನಡೆಸಿದ್ದರು. ಕಳ್ಳರು ಮಾತ್ರ ಪತ್ತೆಯಾಗಿರಲಿಲ್ಲ. ಈಗ ಮತ್ತೆ ಕುರಿ, ಮೇಕೆ ಕಳವು ಶುರುವಾಗಿದೆ.</p><p> ಈ ತಿಂಗಳಲ್ಲಿ ಇದು ಎರಡನೇ ಕಳವು ಪ್ರಕರಣವಾಗಿದೆ. </p><p>ಕಳವು ನಡೆದಿರುವ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕಿನ ಕುಂಟನಹಳ್ಳಿ, ಬೋಕೀಪುರ ಗ್ರಾಮಗಳಲ್ಲಿ ಭಾನುವಾರ ಬೆಳಗಿನ ಜಾವ 3 ಗಂಟೆಗೆ ಕಳ್ಳರು 23 ಕುರಿ,ಮೇಕೆ ಹೊತ್ತು ಒಯ್ದಿದ್ದಾರೆ.</p><p>ಸರಕು ಸಾಗಾಣಿಕೆ ವಾಹನದಲ್ಲಿ ಬಂದಿರುವ ಕಳ್ಳರು ಕುಂಟನಹಳ್ಳಿ ಗ್ರಾಮದ ಮಧ್ಯಭಾಗದಲ್ಲಿರುವ ಆನಂದಮ್ಮ ಚನ್ನಕೇಶವ ಅವರ ಕೊಟ್ಟಿಗೆಯಲ್ಲಿದ್ದ 15 ಕುರಿಗಳನ್ನು ವಾಹನದಲ್ಲಿ ತುಂಬಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p><p> ವಾಹನದ ನಂಬರ್ ಪ್ಲೇಟ್ ಕಾಣದಂತೆ ಬಟ್ಟೆ ಸುತ್ತಲಾಗಿದೆ.</p><p> ಬೋಕಿಪುರ ಗ್ರಾಮದ ನಾಗರಾಜ್, ಭರತ್ ಅವರ ಕುರಿ,ಮೇಕೆಗಳನ್ನು ಕಳವು ಮಾಡಲಾಗಿದೆ. </p><p>2023ರಲ್ಲೂ ಕುರಿ,ಮೇಕೆ, ದನಗಳ ಕಳವು ಮಿತಿ ಮೀರಿತ್ತು. ಕಳ್ಳರ ಹಾವಳಿಗೆ ಬೇಸತ್ತ ರೈತರು ಕುರಿ,ಮೇಕೆಗಳೊಂದಿಗೆ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆಯನ್ನೂ ನಡೆಸಿದ್ದರು. ಕಳ್ಳರು ಮಾತ್ರ ಪತ್ತೆಯಾಗಿರಲಿಲ್ಲ. ಈಗ ಮತ್ತೆ ಕುರಿ, ಮೇಕೆ ಕಳವು ಶುರುವಾಗಿದೆ.</p><p> ಈ ತಿಂಗಳಲ್ಲಿ ಇದು ಎರಡನೇ ಕಳವು ಪ್ರಕರಣವಾಗಿದೆ. </p><p>ಕಳವು ನಡೆದಿರುವ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>