ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಬಿ.ಕೆ.ಶಿವಪ್ಪ ಮಾತನಾಡಿ, 1970ರಿಂದ ವಿಶ್ವಭೂಮಿ ದಿನಾಚರಣೆ ಆರಂಭಗೊಂಡಿದ್ದು,192 ದೇಶದಲ್ಲಿ ಆಚರಣೆಯಲ್ಲಿದೆ. ಪ್ರಕೃತಿ ಸಮತೋಲನ ಕಾಯ್ದುಕೊಳ್ಳಬೇಕಾದ ಅನಿರ್ವಾಯತೆ ಇದೆ. ವನ್ಯ ಜೀವಿ ಸಂಕುಲವನ್ನು ಮುಂದಿನ ಪೀಳಿಗೆಗೆ ಉಳಿಸಿಕೊಳ್ಳಬೇಕಾದರೆ ವನ್ಯ ಜೀವಿಗಳ ಅವಾಸ ಸ್ಥಾನದ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.