<p><strong>\ದೇವನಹಳ್ಳಿ</strong>: 2027ಕ್ಕೆ ಜನಗಣತಿ ಶುರುವಾಗಲಿದ್ದು, ಜಿಲ್ಲೆಯಲ್ಲಿ ಜನಗಣತಿ ಕಾರ್ಯ ಕೈಗೊಳ್ಳಲು ಇಂದಿನಿಂದಲೇ ಪೂರ್ವ ಸಿದ್ಧತೆ ಕೈಗೊಂಡು ಗ್ರಾಮ, ಪಟ್ಟಣಗಳ ಗಡಿ ಗುರುತಿಸುವಿಕೆ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಬಿ ಬಸವರಾಜು ಸೂಚಿಸಿದರು.</p>.<p>ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಜನಗಣತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜನಗಣತಿಯನ್ನು ಯಾವುದೇ ಲೋಪದೋಷ ಇಲ್ಲದಂತೆ ಸಿದ್ಧಪಡಿಸಬೇಕು. ಮೊದಲು ಗ್ರಾಮಗಳ ಗಡಿಗಳ ಗುರುತಿಸುವಿಕೆ ಕಾರ್ಯ ನಡೆಯಲಿದೆ ಎಂದರು.</p>.<p>ಜನಸಂಖ್ಯೆ ಗಣತಿಯೂ 2027ರ ಫೆಬ್ರವರಿರಲ್ಲಿ ಆರಾರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಹೌಸ್ ಲಿಸ್ಟಿಂಗ್ ಮತ್ತು ಮನೆ ಗಣತಿ (ಹಂತ-01) ಕಾರ್ಯವು ಮುಂದಿನ ವರ್ಷ ಏಪ್ರಿಲ್ನಿಂದ ಸೆಪ್ಟೆಂಬರ್ ವರೆಗೆ ನಡೆಯಲಿದೆ. ಜನಗಣತಿಯ ನಿರ್ದೇಶನಾಲಯವು ಗ್ರಾಮ ಮತ್ತು ಪಟ್ಟಣಗಳ ಪಟ್ಟಿ ನೀಡಿದ್ದು ಪರಿಷ್ಕೃತ ಪಟ್ಟಿ ನೀಡಲು ಸೂಚಿಸಿದೆ. ಗ್ರಾಮಗಳ ಪಟ್ಟಿ ಆಧರಿಸಿ ಗ್ರಾಮಗಳ ಗಡಿ ಗುರುತಿಸುವಿಕೆಯಲ್ಲಿ ತಹಶೀಲ್ದಾರ್ ಗಳು ಜವಾಬ್ದಾರಿ ವಹಿಸಬೇಕು ಎಂದು ಸೂಚಿಸಿದರು.</p>.<p>ಯಾವ ಗ್ರಾಮಗಳು, ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿ ಸೇರ್ಪಡೆ ಆಗಿವೆ. ವ್ಯತ್ಯಾಸಗಳೇನು ಎಂಬುದನ್ನು ದೃಢೀಕರಿಸಿ ಗ್ರಾಮಗಳ, ಪಟ್ಟಣಗಳ ಗಡಿಯನ್ನು ನವೆಂಬರ್ ಅಂತ್ಯದೊಳಗೆ ವರದಿ ಸಲ್ಲಿಸಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಉಪವಿಭಾಗಾಧಿಕಾರಿ ದುರ್ಗಶ್ರೀ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್ ಉಪಸ್ಥಿತರಿದ್ದರು.</p>.<p><strong>ಗ್ರಾಮಗಳ</strong> <strong>ಪಟ್ಟಿ (ತಾಲ್ಲೂಕು;ಗ್ರಾಮಗಳ ಸಂಖ್ಯೆ)</strong></p>.<p>ದೇವನಹಳ್ಳಿ;230</p><p>ಹೊಸಕೋಟೆ;302</p><p>ದೊಡ್ಡಬಳ್ಳಾಪುರ;309</p><p>ನೆಲಮಂಗಲ;252</p><p>ಒಟ್ಟು;1093</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>\ದೇವನಹಳ್ಳಿ</strong>: 2027ಕ್ಕೆ ಜನಗಣತಿ ಶುರುವಾಗಲಿದ್ದು, ಜಿಲ್ಲೆಯಲ್ಲಿ ಜನಗಣತಿ ಕಾರ್ಯ ಕೈಗೊಳ್ಳಲು ಇಂದಿನಿಂದಲೇ ಪೂರ್ವ ಸಿದ್ಧತೆ ಕೈಗೊಂಡು ಗ್ರಾಮ, ಪಟ್ಟಣಗಳ ಗಡಿ ಗುರುತಿಸುವಿಕೆ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಬಿ ಬಸವರಾಜು ಸೂಚಿಸಿದರು.</p>.<p>ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಜನಗಣತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜನಗಣತಿಯನ್ನು ಯಾವುದೇ ಲೋಪದೋಷ ಇಲ್ಲದಂತೆ ಸಿದ್ಧಪಡಿಸಬೇಕು. ಮೊದಲು ಗ್ರಾಮಗಳ ಗಡಿಗಳ ಗುರುತಿಸುವಿಕೆ ಕಾರ್ಯ ನಡೆಯಲಿದೆ ಎಂದರು.</p>.<p>ಜನಸಂಖ್ಯೆ ಗಣತಿಯೂ 2027ರ ಫೆಬ್ರವರಿರಲ್ಲಿ ಆರಾರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಹೌಸ್ ಲಿಸ್ಟಿಂಗ್ ಮತ್ತು ಮನೆ ಗಣತಿ (ಹಂತ-01) ಕಾರ್ಯವು ಮುಂದಿನ ವರ್ಷ ಏಪ್ರಿಲ್ನಿಂದ ಸೆಪ್ಟೆಂಬರ್ ವರೆಗೆ ನಡೆಯಲಿದೆ. ಜನಗಣತಿಯ ನಿರ್ದೇಶನಾಲಯವು ಗ್ರಾಮ ಮತ್ತು ಪಟ್ಟಣಗಳ ಪಟ್ಟಿ ನೀಡಿದ್ದು ಪರಿಷ್ಕೃತ ಪಟ್ಟಿ ನೀಡಲು ಸೂಚಿಸಿದೆ. ಗ್ರಾಮಗಳ ಪಟ್ಟಿ ಆಧರಿಸಿ ಗ್ರಾಮಗಳ ಗಡಿ ಗುರುತಿಸುವಿಕೆಯಲ್ಲಿ ತಹಶೀಲ್ದಾರ್ ಗಳು ಜವಾಬ್ದಾರಿ ವಹಿಸಬೇಕು ಎಂದು ಸೂಚಿಸಿದರು.</p>.<p>ಯಾವ ಗ್ರಾಮಗಳು, ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿ ಸೇರ್ಪಡೆ ಆಗಿವೆ. ವ್ಯತ್ಯಾಸಗಳೇನು ಎಂಬುದನ್ನು ದೃಢೀಕರಿಸಿ ಗ್ರಾಮಗಳ, ಪಟ್ಟಣಗಳ ಗಡಿಯನ್ನು ನವೆಂಬರ್ ಅಂತ್ಯದೊಳಗೆ ವರದಿ ಸಲ್ಲಿಸಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಉಪವಿಭಾಗಾಧಿಕಾರಿ ದುರ್ಗಶ್ರೀ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್ ಉಪಸ್ಥಿತರಿದ್ದರು.</p>.<p><strong>ಗ್ರಾಮಗಳ</strong> <strong>ಪಟ್ಟಿ (ತಾಲ್ಲೂಕು;ಗ್ರಾಮಗಳ ಸಂಖ್ಯೆ)</strong></p>.<p>ದೇವನಹಳ್ಳಿ;230</p><p>ಹೊಸಕೋಟೆ;302</p><p>ದೊಡ್ಡಬಳ್ಳಾಪುರ;309</p><p>ನೆಲಮಂಗಲ;252</p><p>ಒಟ್ಟು;1093</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>