ಕನ್ನಡ ಸಾಹಿತ್ಯ, ಸಂಸ್ಕೃತಿಗೆ ಪ್ರತಿಯೊಬ್ಬರೂ ಶ್ರಮಿಸಬೇಕಿದೆ. ಅನೇಕ ಗಣ್ಯರು ಕ್ರೀಡೆ, ನಾಟಕ, ವೈದ್ಯಕೀಯ,ಗಾಳಿಪಟ ಹಾಗೂ ಸಾಹಿತ್ಯ, ಕೃಷಿ ಮತ್ತಿತರೆ ಕ್ಷೇತ್ರದಲ್ಲಿ ನಮ್ಮ ತಾಲ್ಲೂಕಿನ ಗೌರವ ಹೆಚ್ಚಿಸಿದ್ದಾರೆ. ನಗರದಲ್ಲಿ ರೇಷ್ಮೆ ಉದ್ಯಮ ಹಾಗೂ ಕೈಗಾರಿಕಾ ಪ್ರದೇಶಗಳಿದ್ದರೂ ಸಹ ತಾಲ್ಲೂಕಿನಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಬಯಲು ಸೀಮೆಯ ಪ್ರಾಂತ್ಯದಲ್ಲಿರುವ ನಮಗೆ ಶಾಶ್ವತ ನೀರಾವರಿ ಕೊರತೆ ಇದ್ದು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಕಷ್ಟಕರವಾಗಿದೆ ಎಂದು ಅವರು ಹೇಳಿದರು.