<p><strong>ದೇವನಹಳ್ಳಿ:</strong> ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ, ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆಎಂಎಫ್ ಸಹಯೋಗದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.</p>.<p>ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ರಾಗಿ ಹೆಲ್ತ್ ಮಿಕ್ಸ್ ವಿತರಿಸುವ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್ ಅನುರಾಧ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಈಗಾಗಲೇ ಬಿಸಿಯೂಟ, ಮೊಟ್ಟೆ,ಹಾಲು, ಚಿಕ್ಕಿ ನೀಡುತ್ತಿದೆ. ಇದರ ಜತೆ ಇಂದಿನಿಂದ ಜೊತೆ ರಾಗಿ ಮಾಲ್ಟ್ ಅನ್ನು ಸೋಮವಾರ, ಬುಧವಾರ, ಶುಕ್ರವಾರ ವಿತರಿಸಲಾಗುವುದು ಎಂದರು.</p>.<p>ಮಕ್ಕಳ ಅಪೌಷ್ಟಿಕತೆಯನ್ನು ತಡೆಗಟ್ಟಲು ಹಾಗೂ ಮಕ್ಕಳು ಮಧ್ಯಾಹ್ನ ಊಟ ಸೇವಿಸದೇ ಇರಬಾರದು ಎಂಬ ಹಿತದೃಷ್ಟಿಯಿಂದ ಜಾರಿಗೆ ರಾಗಿ ಮಾಲ್ಟ್ ವಿತರಣೆ ಜಾರಿಗೆ ತರಲಾಗಿದೆ. ಸಿರಿಧಾನ್ಯಗಳ ಸೇವನೆಯಿಂದ ಮಕ್ಕಳು ಆರೋಗ್ಯವಂತರಾಗಿ ಬೆಳೆಯುತ್ತಾರೆ. ಇದರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ರಾಗಿಯಲ್ಲಿ ಹೆಚ್ಚು ಕಬ್ಬಿಣಾಂಶ, ಪ್ರೋಟೀನ್, ಪೌಷ್ಟಿಕಾಂಶಗಳು ಇದೆ. ಇದರ ಸೇವನೆಯಿಂದ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ತಪ್ಪದೇ ಸೇವಿಸಿ ಎಂದು ಹೇಳಿದರು. ಜಿಲ್ಲೆಯ 68,000 ಮಕ್ಕಳಿಗೆ ಯೋಜನೆಯ ಸೌಲಭ್ಯ ದೊರಕಲಿದೆ ಎಂದು ಮಾಹಿತಿ ನೀಡಿದರು.</p>.<p>ಶಾಲಾ ಶಿಕ್ಷಣ ಉಪನಿರ್ದೇಶಕ ಕೃಷ್ಣ ಮೂರ್ತಿ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಪಿಎಂ ಪೋಷಣ್ ಶಕ್ತಿ ನಿರ್ಮಾಣ ಶಿಕ್ಷಣಾಧಿಕಾರಿ ಲಲಿತಮ್ಮ , ತಾಲ್ಲೂಕು ಶಿಕ್ಷಣಾಧಿಕಾರಿ ಸುಧಾ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ, ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆಎಂಎಫ್ ಸಹಯೋಗದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.</p>.<p>ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ರಾಗಿ ಹೆಲ್ತ್ ಮಿಕ್ಸ್ ವಿತರಿಸುವ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್ ಅನುರಾಧ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಈಗಾಗಲೇ ಬಿಸಿಯೂಟ, ಮೊಟ್ಟೆ,ಹಾಲು, ಚಿಕ್ಕಿ ನೀಡುತ್ತಿದೆ. ಇದರ ಜತೆ ಇಂದಿನಿಂದ ಜೊತೆ ರಾಗಿ ಮಾಲ್ಟ್ ಅನ್ನು ಸೋಮವಾರ, ಬುಧವಾರ, ಶುಕ್ರವಾರ ವಿತರಿಸಲಾಗುವುದು ಎಂದರು.</p>.<p>ಮಕ್ಕಳ ಅಪೌಷ್ಟಿಕತೆಯನ್ನು ತಡೆಗಟ್ಟಲು ಹಾಗೂ ಮಕ್ಕಳು ಮಧ್ಯಾಹ್ನ ಊಟ ಸೇವಿಸದೇ ಇರಬಾರದು ಎಂಬ ಹಿತದೃಷ್ಟಿಯಿಂದ ಜಾರಿಗೆ ರಾಗಿ ಮಾಲ್ಟ್ ವಿತರಣೆ ಜಾರಿಗೆ ತರಲಾಗಿದೆ. ಸಿರಿಧಾನ್ಯಗಳ ಸೇವನೆಯಿಂದ ಮಕ್ಕಳು ಆರೋಗ್ಯವಂತರಾಗಿ ಬೆಳೆಯುತ್ತಾರೆ. ಇದರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ರಾಗಿಯಲ್ಲಿ ಹೆಚ್ಚು ಕಬ್ಬಿಣಾಂಶ, ಪ್ರೋಟೀನ್, ಪೌಷ್ಟಿಕಾಂಶಗಳು ಇದೆ. ಇದರ ಸೇವನೆಯಿಂದ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ತಪ್ಪದೇ ಸೇವಿಸಿ ಎಂದು ಹೇಳಿದರು. ಜಿಲ್ಲೆಯ 68,000 ಮಕ್ಕಳಿಗೆ ಯೋಜನೆಯ ಸೌಲಭ್ಯ ದೊರಕಲಿದೆ ಎಂದು ಮಾಹಿತಿ ನೀಡಿದರು.</p>.<p>ಶಾಲಾ ಶಿಕ್ಷಣ ಉಪನಿರ್ದೇಶಕ ಕೃಷ್ಣ ಮೂರ್ತಿ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಪಿಎಂ ಪೋಷಣ್ ಶಕ್ತಿ ನಿರ್ಮಾಣ ಶಿಕ್ಷಣಾಧಿಕಾರಿ ಲಲಿತಮ್ಮ , ತಾಲ್ಲೂಕು ಶಿಕ್ಷಣಾಧಿಕಾರಿ ಸುಧಾ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>