ಇಡೀ ವಿಶ್ವವೇ ಒಂದು ಕುಟುಂಬ. ಇಲ್ಲಿ ಜಾತಿ, ಮತ, ಧರ್ಮಗಳ ಹಂಗಿರಬಾರದು. ಪರಸ್ಪರ ಒಬ್ಬರಿಗೊಬ್ಬರು ಸಹಕಾರ, ಸಹಾಯ ಮಾಡುತ್ತಾ ಕುಟುಂಬದ ಯಜಮಾನನ ನಿರ್ದೇಶನಗಳನ್ನು ಪಾಲನೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು, ಅದನ್ನು ಪಾಲನೆ ಮಾಡುತ್ತಿದ್ದೇವೆ. ಇದರಿಂದ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ದೇಶ ಪ್ರೇಮ, ಗುರುಹಿರಿಯರಲ್ಲಿ ಗೌರವಭಾವನೆ ಮೂಡಲು ಅವಕಾಶವಾಗುತ್ತದೆ ಎಂದರು.