<p><strong>ಸರ್ಜಾಪುರ (ಆನೇಕಲ್):</strong> ಗ್ರಾಮಸ್ಥರ ದೇಣಿಗೆ ಹಾಗೂ ಸರ್ಕಾರದ ಸ್ವಲ್ಪ ಅನುದಾನದಿಂದ ನಿರ್ಮಿಸಿದ ಸರ್ಜಾಪುರ ಸಮೀಪದ ಯಮರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಂಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಶಾಸಕ ಬಿ.ಶಿವಣ್ಣ ಗುರುವಾರ ಉದ್ಘಾಟಿಸಿದರು.</p>.<p>ಚಂಬೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಚಿಕ್ಕ ಕೊಠಡಿಗಳಿದ್ದವು. ಪಾಠಕ್ಕೆ ತೊಂದರೆ ಆಗಿತ್ತು. ಶಾಲಾ ಕಟ್ಟಡ ಸುರಕ್ಷತೆಯ ನಿಟ್ಟಿನಲ್ಲಿ ಗ್ರಾಮಸ್ಥರೆಲ್ಲರೂ ಒಗ್ಗೂಡಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ.</p>.<p>ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರಮಿಸಿದ ಪವಿತ್ರಾ ಜಯಪ್ರಕಾಶ್, ಯಮರೆ ಜಯಶಂಕರ್, ಯಮರೆ ಶ್ರೀನಿವಾಸರೆಡ್ಡಿ, ವಿಜಯಕುಮಾರ್, ಸೋಂಪುರ ಕೆಂಪಣ್ಣ, ಶ್ರೀನಿವಾಸ್, ಮಣಿ, ಸುಬ್ರಮಣಿ, ರಾಮಚಂದ್ರ, ಮಂಜುನಾಥ್, ಅನಿಲಕ್, ಗೋಪಾಲ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.</p>.<p>ಗ್ರಾಮದಲ್ಲಿನ ಸರ್ಕಾರಿ ಆಸ್ತಿಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆ, ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಗ್ರಾಮದ ಪ್ರತಿಯೊಬ್ಬರು ಕೊಡುಗೆ ನೀಡಬೇಕು ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.</p>.<p>ಮಹಿಳಾ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷೆ ಸುಶೀಲಮ್ಮ, ನಿವೃತ್ತ ಸೈನಿಕ ವೇಣು, ಮುಖಂಡರಾದ ರಾಜೇಶ್ವರಿ, ಶಾಂತಕುಮಾರ್, ಸಂಪಂಗಿ, ಕೃಷ್ಣ, ಗೋಪಾಲ್, ಮುರುಗೇಶ್, ಮರಿಯಪ್ಪ, ರಮೇಶ್, ಮಂಜುನಾಥ್, ರಂಗರಾಜು, ಕೃಷ್ಣ, ಅಶ್ವಥ್ ನಾರಾಯಣ್, ಪಾಪಣ್ಣ ಇದ್ದರು.</p>.<p><strong>ಹೋಬಳಿಗೊಂದು ಸರ್ಕಾರಿ ಪಿಯು ಕಾಲೇಜು</strong></p><p> ಆನೇಕಲ್ ತಾಲ್ಲೂಕಿನ ಪ್ರತಿ ಹೋಬಳಿಯಲ್ಲಿಯೂ ಸರ್ಕಾರಿ ಪಿಯು ಕಾಲೇಜು ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಹಲವೆಡೆ ಪ್ರೌಢ ಶಾಲಾಗಳ ಅವಶ್ಯಕತೆಯಿದ್ದು ಈ ನಿಟ್ಟಿನಲ್ಲಿ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆದು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರ್ಜಾಪುರ (ಆನೇಕಲ್):</strong> ಗ್ರಾಮಸ್ಥರ ದೇಣಿಗೆ ಹಾಗೂ ಸರ್ಕಾರದ ಸ್ವಲ್ಪ ಅನುದಾನದಿಂದ ನಿರ್ಮಿಸಿದ ಸರ್ಜಾಪುರ ಸಮೀಪದ ಯಮರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಂಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಶಾಸಕ ಬಿ.ಶಿವಣ್ಣ ಗುರುವಾರ ಉದ್ಘಾಟಿಸಿದರು.</p>.<p>ಚಂಬೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಚಿಕ್ಕ ಕೊಠಡಿಗಳಿದ್ದವು. ಪಾಠಕ್ಕೆ ತೊಂದರೆ ಆಗಿತ್ತು. ಶಾಲಾ ಕಟ್ಟಡ ಸುರಕ್ಷತೆಯ ನಿಟ್ಟಿನಲ್ಲಿ ಗ್ರಾಮಸ್ಥರೆಲ್ಲರೂ ಒಗ್ಗೂಡಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ.</p>.<p>ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರಮಿಸಿದ ಪವಿತ್ರಾ ಜಯಪ್ರಕಾಶ್, ಯಮರೆ ಜಯಶಂಕರ್, ಯಮರೆ ಶ್ರೀನಿವಾಸರೆಡ್ಡಿ, ವಿಜಯಕುಮಾರ್, ಸೋಂಪುರ ಕೆಂಪಣ್ಣ, ಶ್ರೀನಿವಾಸ್, ಮಣಿ, ಸುಬ್ರಮಣಿ, ರಾಮಚಂದ್ರ, ಮಂಜುನಾಥ್, ಅನಿಲಕ್, ಗೋಪಾಲ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.</p>.<p>ಗ್ರಾಮದಲ್ಲಿನ ಸರ್ಕಾರಿ ಆಸ್ತಿಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆ, ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಗ್ರಾಮದ ಪ್ರತಿಯೊಬ್ಬರು ಕೊಡುಗೆ ನೀಡಬೇಕು ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.</p>.<p>ಮಹಿಳಾ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷೆ ಸುಶೀಲಮ್ಮ, ನಿವೃತ್ತ ಸೈನಿಕ ವೇಣು, ಮುಖಂಡರಾದ ರಾಜೇಶ್ವರಿ, ಶಾಂತಕುಮಾರ್, ಸಂಪಂಗಿ, ಕೃಷ್ಣ, ಗೋಪಾಲ್, ಮುರುಗೇಶ್, ಮರಿಯಪ್ಪ, ರಮೇಶ್, ಮಂಜುನಾಥ್, ರಂಗರಾಜು, ಕೃಷ್ಣ, ಅಶ್ವಥ್ ನಾರಾಯಣ್, ಪಾಪಣ್ಣ ಇದ್ದರು.</p>.<p><strong>ಹೋಬಳಿಗೊಂದು ಸರ್ಕಾರಿ ಪಿಯು ಕಾಲೇಜು</strong></p><p> ಆನೇಕಲ್ ತಾಲ್ಲೂಕಿನ ಪ್ರತಿ ಹೋಬಳಿಯಲ್ಲಿಯೂ ಸರ್ಕಾರಿ ಪಿಯು ಕಾಲೇಜು ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಹಲವೆಡೆ ಪ್ರೌಢ ಶಾಲಾಗಳ ಅವಶ್ಯಕತೆಯಿದ್ದು ಈ ನಿಟ್ಟಿನಲ್ಲಿ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆದು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>