<p><strong>ದೊಡ್ಡಬಳ್ಳಾಪುರ:</strong>ಶ್ರೀಪ್ರಸನ್ನ ಚಂದ್ರಮೌಳೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಶ್ರೀಗಿರಿಜಾ ಕಲ್ಯಾಣೋತ್ಸವ ಹಾಗೂ ಲಕ್ಷ ದೀಪೋತ್ಸವ ಸಂಭ್ರಮದಿಂದ ನೆರವೇರಿತು. ಬ್ರಹ್ಮ ರಥೋತ್ಸವವು ನ. 29ರಂದು ಮಧ್ಯಾಹ್ನ 1 ಗಂಟೆಯಿಂದ ನಗರದ ತೇರಿನ ಬೀದಿಯಲ್ಲಿ ನಡೆಯಲಿದೆ. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಪ್ರಾಕಾರೋತ್ಸವ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿವೆ.</p>.<p>ಕಡಲೆಕಾಯಿ ಪರಿಷೆ:ನಗರದ ಕೊಂಗಾಡಿಯಪ್ಪ ಕಾಲೇಜು ಸಮೀಪದ ಬಯಲು ಬಸವಣ್ಣ ದೇವಸ್ಥಾನದ ಸೇವಾ ಟ್ರಸ್ಟ್, ಕರ್ನಾಟಕ ಕನ್ನಡ ಅಭಿಮಾನಿಗಳ ಸಂಘದಿಂದ ನ. 29ರಂದು ಕನ್ನಡ ರಾಜ್ಯೋತ್ಸವ ಹಾಗೂ ಕಡಲೆಕಾಯಿ ಪರಿಷೆ ನಡೆಯಲಿದೆ. ಇದರ ಅಂಗವಾಗಿ ಭಾನುವಾರ ಸಂಜೆ ಗಿರಿಜಾ ಕಲ್ಯಾಣೋತ್ಸವ ನಡೆಯಿತು.</p>.<p>ತಾಲ್ಲೂಕಿನ ಶಿರವಾರ, ಅಂತರಹಳ್ಳಿ ಗ್ರಾಮದಲ್ಲಿನ ತೋಪಿನ ಬಸವೇಶ್ವರಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ 6ನೇ ವರ್ಷದ ಕಡಲೆ ಕಾಯಿ ಪರಿಷೆಯು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ. ಸಂಜೆ 6ಗಂಟೆಗೆ ಬಸವೇಶ್ವರಸ್ವಾಮಿ ಮೆರವಣಿಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong>ಶ್ರೀಪ್ರಸನ್ನ ಚಂದ್ರಮೌಳೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಶ್ರೀಗಿರಿಜಾ ಕಲ್ಯಾಣೋತ್ಸವ ಹಾಗೂ ಲಕ್ಷ ದೀಪೋತ್ಸವ ಸಂಭ್ರಮದಿಂದ ನೆರವೇರಿತು. ಬ್ರಹ್ಮ ರಥೋತ್ಸವವು ನ. 29ರಂದು ಮಧ್ಯಾಹ್ನ 1 ಗಂಟೆಯಿಂದ ನಗರದ ತೇರಿನ ಬೀದಿಯಲ್ಲಿ ನಡೆಯಲಿದೆ. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಪ್ರಾಕಾರೋತ್ಸವ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿವೆ.</p>.<p>ಕಡಲೆಕಾಯಿ ಪರಿಷೆ:ನಗರದ ಕೊಂಗಾಡಿಯಪ್ಪ ಕಾಲೇಜು ಸಮೀಪದ ಬಯಲು ಬಸವಣ್ಣ ದೇವಸ್ಥಾನದ ಸೇವಾ ಟ್ರಸ್ಟ್, ಕರ್ನಾಟಕ ಕನ್ನಡ ಅಭಿಮಾನಿಗಳ ಸಂಘದಿಂದ ನ. 29ರಂದು ಕನ್ನಡ ರಾಜ್ಯೋತ್ಸವ ಹಾಗೂ ಕಡಲೆಕಾಯಿ ಪರಿಷೆ ನಡೆಯಲಿದೆ. ಇದರ ಅಂಗವಾಗಿ ಭಾನುವಾರ ಸಂಜೆ ಗಿರಿಜಾ ಕಲ್ಯಾಣೋತ್ಸವ ನಡೆಯಿತು.</p>.<p>ತಾಲ್ಲೂಕಿನ ಶಿರವಾರ, ಅಂತರಹಳ್ಳಿ ಗ್ರಾಮದಲ್ಲಿನ ತೋಪಿನ ಬಸವೇಶ್ವರಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ 6ನೇ ವರ್ಷದ ಕಡಲೆ ಕಾಯಿ ಪರಿಷೆಯು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ. ಸಂಜೆ 6ಗಂಟೆಗೆ ಬಸವೇಶ್ವರಸ್ವಾಮಿ ಮೆರವಣಿಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>