<p><strong>ದೊಡ್ಡಬಳ್ಳಾಪುರ: ನ</strong>ಗರದ ತೇರಿನ ಬೀದಿಯಲ್ಲಿ ಶ್ರೀಪ್ರಸನ್ನ ಚಂದ್ರಮೌಳೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು.</p>.<p>ಮುಜರಾಯಿ ಇಲಾಖೆ ಹಾಗೂ ದೇವಾಲಯದ ಭಕ್ತ ಮಂಡಳಿಯಿಂದ ತಾಲ್ಲೂಕು ತಹಶೀಲ್ದಾರ್ ಉಸ್ತುವಾರಿಯಲ್ಲಿ ನಡೆದ ಬ್ರಹ್ಮ ರಥೋತ್ಸವದಲ್ಲಿ ವಿವಿಧೆಡೆಯಿಂದಆಗಮಿಸಿದ್ದ ಸಹಸ್ರಾರು ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಅರ್ಪಿಸಿ ಧನ್ಯತಾ ಭಾವ ಮೆರೆದರು.</p>.<p>ಕಳೆದ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸಣ್ಣ ರಥದಲ್ಲಿ ಸಾಂಕೇತಿಕವಾಗಿ ರಥೋತ್ಸವ ಆಚರಿಸಲಾಗಿತ್ತು. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಗಿರಿಜಾ ಕಲ್ಯಾಣೋತ್ಸವ ನಡೆಯಿತು. 5 ಅಡಿ ಕಲ್ಲಿನ ಚಕ್ರಗಳ ಮೇಲೆ, ಐದು ಅಂತಸ್ತುಗಳ ಶಿವನ ವಿವಿಧ ರೂಪ, ಅವತಾರಗಳನ್ನು ಹೊಂದಿರುವ ಚಿತ್ರಪಟಗಳು ಹಾಗೂ ತಳಿರುತೋರಣಗಳಿಂದ ಭವ್ಯ ರಥವು ಸಿಂಗಾರಗೊಂಡಿತ್ತು. ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಯಾಗ, ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಶ್ರೀಕಂಠೇಶ್ವರ ಭಕ್ತ ಮಂಡಳಿ, ನಂಜುಂಡೇಶ್ವರ ಸೇವಾ ಸಮಿತಿ ಸೇರಿದಂತೆ ವಿವಿಧ ಅರವಂಟಿಗೆ ಸಮಿತಿಗಳಿಂದ ಜಾತ್ರೆಗೆ ಆಗಮಿಸಿದ್ದ ಭಕ್ತಾದಿಗಳಿಗೆ ಅರವಂಟಿಗೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ರಥೋತ್ಸವದಲ್ಲಿ ತಹಶೀಲ್ದಾರ್ ಟಿ.ಎಸ್. ಶಿವರಾಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: ನ</strong>ಗರದ ತೇರಿನ ಬೀದಿಯಲ್ಲಿ ಶ್ರೀಪ್ರಸನ್ನ ಚಂದ್ರಮೌಳೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು.</p>.<p>ಮುಜರಾಯಿ ಇಲಾಖೆ ಹಾಗೂ ದೇವಾಲಯದ ಭಕ್ತ ಮಂಡಳಿಯಿಂದ ತಾಲ್ಲೂಕು ತಹಶೀಲ್ದಾರ್ ಉಸ್ತುವಾರಿಯಲ್ಲಿ ನಡೆದ ಬ್ರಹ್ಮ ರಥೋತ್ಸವದಲ್ಲಿ ವಿವಿಧೆಡೆಯಿಂದಆಗಮಿಸಿದ್ದ ಸಹಸ್ರಾರು ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಅರ್ಪಿಸಿ ಧನ್ಯತಾ ಭಾವ ಮೆರೆದರು.</p>.<p>ಕಳೆದ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸಣ್ಣ ರಥದಲ್ಲಿ ಸಾಂಕೇತಿಕವಾಗಿ ರಥೋತ್ಸವ ಆಚರಿಸಲಾಗಿತ್ತು. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಗಿರಿಜಾ ಕಲ್ಯಾಣೋತ್ಸವ ನಡೆಯಿತು. 5 ಅಡಿ ಕಲ್ಲಿನ ಚಕ್ರಗಳ ಮೇಲೆ, ಐದು ಅಂತಸ್ತುಗಳ ಶಿವನ ವಿವಿಧ ರೂಪ, ಅವತಾರಗಳನ್ನು ಹೊಂದಿರುವ ಚಿತ್ರಪಟಗಳು ಹಾಗೂ ತಳಿರುತೋರಣಗಳಿಂದ ಭವ್ಯ ರಥವು ಸಿಂಗಾರಗೊಂಡಿತ್ತು. ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಯಾಗ, ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಶ್ರೀಕಂಠೇಶ್ವರ ಭಕ್ತ ಮಂಡಳಿ, ನಂಜುಂಡೇಶ್ವರ ಸೇವಾ ಸಮಿತಿ ಸೇರಿದಂತೆ ವಿವಿಧ ಅರವಂಟಿಗೆ ಸಮಿತಿಗಳಿಂದ ಜಾತ್ರೆಗೆ ಆಗಮಿಸಿದ್ದ ಭಕ್ತಾದಿಗಳಿಗೆ ಅರವಂಟಿಗೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ರಥೋತ್ಸವದಲ್ಲಿ ತಹಶೀಲ್ದಾರ್ ಟಿ.ಎಸ್. ಶಿವರಾಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>