<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಹನುಮಾಪುರದದೊಡ್ಡಿಯ ಸ್ಮಶಾನದಲ್ಲಿ ಸೋಮವಾರ ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆಗೆ ಅಡ್ಡಪಡಿಸಿದ್ದರಿಂದ ಶವವನ್ನು ಟ್ರ್ಯಾಕ್ಟರ್ನಲ್ಲಿಟ್ಟು ಪ್ರತಿಭಟನೆ ನಡೆಸಲಾಯಿತು.</p>.<p>ನಾಥಯ್ಯ (75) ಎಂಬುವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಶವವನ್ನು ಅಂತ್ಯಸಂಸ್ಕಾರಕ್ಕೆ ಸ್ಮಶಾನಕ್ಕೆ ಕೊಂಡೊಯ್ದ ಸಂದರ್ಭದಲ್ಲಿ ಗ್ರಾಮದ ರೈತರೊಬ್ಬರು ಜಾಗ ತಮಗೆ ಸೇರಿದ್ದು ಎಂದು ಶವಸಂಸ್ಕಾರಕ್ಕೆ ಅಡ್ಡಿಪಡಿಸಿದರು. ಇದರಿಂದ ಆಕ್ರೋಶಗೊಂಡು ಜನರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.</p>.<p>ಈ ಸ್ಮಶಾನದಲ್ಲಿ ಸುಮಾರು 60 ವರ್ಷಗಳಿಂದಲೂ ಶವಸಂಸ್ಕಾರ ಮಾಡಿಕೊಂಡು ಬರಲಾಗಿದೆ. ಈ ಜಮೀನು ದಾನದ ಜಮೀನಾಗಿದೆ. ಮೂರೂವರೆ ಎಕರೆ ಸಾರ್ವಜನಿಕರ ಉಪಯೋಗಕ್ಕಾಗಿ ಬಿಟ್ಟಿದ್ದು ಅದರಲ್ಲಿ ಆಶ್ರಯ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಹಾಗಾಗಿ ಜಮೀನಿನಲ್ಲಿ ಶವಸಂಸ್ಕಾರಕ್ಕೆ ಅವರು ಅಡ್ಡಿಪಡಿಸಿದ್ದಾರೆ ಎಂದು ತಿಳಿದು<br />ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಹನುಮಾಪುರದದೊಡ್ಡಿಯ ಸ್ಮಶಾನದಲ್ಲಿ ಸೋಮವಾರ ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆಗೆ ಅಡ್ಡಪಡಿಸಿದ್ದರಿಂದ ಶವವನ್ನು ಟ್ರ್ಯಾಕ್ಟರ್ನಲ್ಲಿಟ್ಟು ಪ್ರತಿಭಟನೆ ನಡೆಸಲಾಯಿತು.</p>.<p>ನಾಥಯ್ಯ (75) ಎಂಬುವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಶವವನ್ನು ಅಂತ್ಯಸಂಸ್ಕಾರಕ್ಕೆ ಸ್ಮಶಾನಕ್ಕೆ ಕೊಂಡೊಯ್ದ ಸಂದರ್ಭದಲ್ಲಿ ಗ್ರಾಮದ ರೈತರೊಬ್ಬರು ಜಾಗ ತಮಗೆ ಸೇರಿದ್ದು ಎಂದು ಶವಸಂಸ್ಕಾರಕ್ಕೆ ಅಡ್ಡಿಪಡಿಸಿದರು. ಇದರಿಂದ ಆಕ್ರೋಶಗೊಂಡು ಜನರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.</p>.<p>ಈ ಸ್ಮಶಾನದಲ್ಲಿ ಸುಮಾರು 60 ವರ್ಷಗಳಿಂದಲೂ ಶವಸಂಸ್ಕಾರ ಮಾಡಿಕೊಂಡು ಬರಲಾಗಿದೆ. ಈ ಜಮೀನು ದಾನದ ಜಮೀನಾಗಿದೆ. ಮೂರೂವರೆ ಎಕರೆ ಸಾರ್ವಜನಿಕರ ಉಪಯೋಗಕ್ಕಾಗಿ ಬಿಟ್ಟಿದ್ದು ಅದರಲ್ಲಿ ಆಶ್ರಯ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಹಾಗಾಗಿ ಜಮೀನಿನಲ್ಲಿ ಶವಸಂಸ್ಕಾರಕ್ಕೆ ಅವರು ಅಡ್ಡಿಪಡಿಸಿದ್ದಾರೆ ಎಂದು ತಿಳಿದು<br />ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>