ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟ ಜಾತಿಯ ವ್ಯಕ್ತಿ ಅಂತ್ಯಕ್ರಿಯೆಗೆ ಅಡ್ಡಿ: ಶವ ಇಟ್ಟು ಪ್ರತಿಭಟನೆ

Last Updated 6 ಏಪ್ರಿಲ್ 2021, 3:18 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ಹನುಮಾಪುರದದೊಡ್ಡಿಯ ಸ್ಮಶಾನದಲ್ಲಿ ಸೋಮವಾರ ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆಗೆ ಅಡ್ಡಪಡಿಸಿದ್ದರಿಂದ ಶವವನ್ನು ಟ್ರ್ಯಾಕ್ಟರ್‌ನಲ್ಲಿಟ್ಟು ಪ್ರತಿಭಟನೆ ನಡೆಸಲಾಯಿತು.

ನಾಥಯ್ಯ (75) ಎಂಬುವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಶವವನ್ನು ಅಂತ್ಯಸಂಸ್ಕಾರಕ್ಕೆ ಸ್ಮಶಾನಕ್ಕೆ ಕೊಂಡೊಯ್ದ ಸಂದರ್ಭದಲ್ಲಿ ಗ್ರಾಮದ ರೈತರೊಬ್ಬರು ಜಾಗ ತಮಗೆ ಸೇರಿದ್ದು ಎಂದು ಶವಸಂಸ್ಕಾರಕ್ಕೆ ಅಡ್ಡಿಪಡಿಸಿದರು. ಇದರಿಂದ ಆಕ್ರೋಶಗೊಂಡು ಜನರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.

ಈ ಸ್ಮಶಾನದಲ್ಲಿ ಸುಮಾರು 60 ವರ್ಷಗಳಿಂದಲೂ ಶವಸಂಸ್ಕಾರ ಮಾಡಿಕೊಂಡು ಬರಲಾಗಿದೆ. ಈ ಜಮೀನು ದಾನದ ಜಮೀನಾಗಿದೆ. ಮೂರೂವರೆ ಎಕರೆ ಸಾರ್ವಜನಿಕರ ಉಪಯೋಗಕ್ಕಾಗಿ ಬಿಟ್ಟಿದ್ದು ಅದರಲ್ಲಿ ಆಶ್ರಯ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಹಾಗಾಗಿ ಜಮೀನಿನಲ್ಲಿ ಶವಸಂಸ್ಕಾರಕ್ಕೆ ಅವರು ಅಡ್ಡಿಪಡಿಸಿದ್ದಾರೆ ಎಂದು ತಿಳಿದು
ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT